<p>ಮಂಗಳೂರು: ಇಲ್ಲಿನ ಮೈಂಡ್ಫುಲ್ ಕನ್ಸಲ್ಟಿಂಗ್ ಸಂಸ್ಥೆಗೆ ಡಿಜಿಟಲ್ ಮಾರ್ಕೆಟಿಂಗ್ನ ಉತ್ತಮ ಅಭಿಯಾನಕ್ಕಾಗಿ ಕಾನ್ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಆಯೋಜಿತ ರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರಶಸ್ತಿ ದೊರೆತಿದೆ ಎಂದು ಸಂಸ್ಥೆಯ ಸಂಸ್ಥಾಪಕ ಸಂಜಯ್ ಭಟ್ ಹೇಳಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ತನ ಕ್ಯಾನ್ಸರ್ ತಪಾಸಣೆ ಜಾಗೃತಿಯ ಮೇಲೆ ಕೇಂದ್ರೀಕರಿಸಿದ ಅಭಿಯಾನವು ಸಾಮಾಜಿಕ ಜಾಲತಾಣಗಳ ಮೂಲಕ 1.56 ಕೋಟಿಗೂ ಅಧಿಕ ಭಾರತೀಯ ಮಹಿಳೆಯರಲ್ಲಿ ಈ ಬಗ್ಗೆ ತಿಳಿವಳಿಕೆ ಮೂಡಿಸಿದೆ. ಸ್ಪರ್ಧೆಯಲ್ಲಿ 205 ಕಂಪನಿಗಳು ಭಾಗವಹಿಸಿದ್ದವು’ ಎಂದರು.</p>.<p>ಡಾ. ಪ್ರವೀಣ್ ಜಾನ್ ಮಾತನಾಡಿ, ‘ಸ್ತನ ಕ್ಯಾನ್ಸರ್ ಬೇಗ ಪತ್ತೆ ಮಾಡಿದರೆ ಗುಣಪಡಿಸಲು ಸಾಧ್ಯ. 40 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ ಹೈರಿಸ್ಕ್ ಗುಂಪಿನ ಯುವತಿಯರು ವರ್ಷಕ್ಕೊಮ್ಮೆ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ’ ಎಂದರು. ಸಿಐಐ ಜಿಲ್ಲಾ ಘಟಕದ ಅಧ್ಯಕ್ಷ ಅಭಿನವ್ ಬನ್ಸಲ್, ಡಾ. ಕೃಷ್ಣ ಶರಣ್, ಡಾ. ಮನೋಹರ್ ಪೈ, ಡಾ. ಶ್ರವ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-29-1874229455</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಇಲ್ಲಿನ ಮೈಂಡ್ಫುಲ್ ಕನ್ಸಲ್ಟಿಂಗ್ ಸಂಸ್ಥೆಗೆ ಡಿಜಿಟಲ್ ಮಾರ್ಕೆಟಿಂಗ್ನ ಉತ್ತಮ ಅಭಿಯಾನಕ್ಕಾಗಿ ಕಾನ್ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಆಯೋಜಿತ ರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರಶಸ್ತಿ ದೊರೆತಿದೆ ಎಂದು ಸಂಸ್ಥೆಯ ಸಂಸ್ಥಾಪಕ ಸಂಜಯ್ ಭಟ್ ಹೇಳಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ತನ ಕ್ಯಾನ್ಸರ್ ತಪಾಸಣೆ ಜಾಗೃತಿಯ ಮೇಲೆ ಕೇಂದ್ರೀಕರಿಸಿದ ಅಭಿಯಾನವು ಸಾಮಾಜಿಕ ಜಾಲತಾಣಗಳ ಮೂಲಕ 1.56 ಕೋಟಿಗೂ ಅಧಿಕ ಭಾರತೀಯ ಮಹಿಳೆಯರಲ್ಲಿ ಈ ಬಗ್ಗೆ ತಿಳಿವಳಿಕೆ ಮೂಡಿಸಿದೆ. ಸ್ಪರ್ಧೆಯಲ್ಲಿ 205 ಕಂಪನಿಗಳು ಭಾಗವಹಿಸಿದ್ದವು’ ಎಂದರು.</p>.<p>ಡಾ. ಪ್ರವೀಣ್ ಜಾನ್ ಮಾತನಾಡಿ, ‘ಸ್ತನ ಕ್ಯಾನ್ಸರ್ ಬೇಗ ಪತ್ತೆ ಮಾಡಿದರೆ ಗುಣಪಡಿಸಲು ಸಾಧ್ಯ. 40 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ ಹೈರಿಸ್ಕ್ ಗುಂಪಿನ ಯುವತಿಯರು ವರ್ಷಕ್ಕೊಮ್ಮೆ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ’ ಎಂದರು. ಸಿಐಐ ಜಿಲ್ಲಾ ಘಟಕದ ಅಧ್ಯಕ್ಷ ಅಭಿನವ್ ಬನ್ಸಲ್, ಡಾ. ಕೃಷ್ಣ ಶರಣ್, ಡಾ. ಮನೋಹರ್ ಪೈ, ಡಾ. ಶ್ರವ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-29-1874229455</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>