<p><strong>ಮಂಗಳೂರು:</strong> ಮತೀಯ ಗೂಂಡಾಗಿರಿ ನಡೆಸಿದ ಆರೋಪದ ಮೇಲೆ ಆರು ಮಂದಿಯನ್ನು ನಗರದ ಪಾಂಡೇಶ್ವರದ ದಕ್ಷಿಣ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ. </p>.<p>ಗಣೇಶ, ಶ್ರೇಯಸ್, ಚಿಂಟು, ಚಂದನ್, ನಾಗರಾಜ್ ಹಾಗೂ ರಾಮಚಂದ್ರ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಬೇರೆ ಬೇರೆ ಧರ್ಮಕ್ಕೆ ಸೇರಿದ ಯುವಕ ಹಾಗೂ ವಿದ್ಯಾರ್ಥಿನಿ ಸೋಮವಾರ (ಆ 11) ಸಂಜೆ ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳು ತಡೆದು ನಿಲ್ಲಿಸಿದ್ದು, ವಿದ್ಯಾರ್ಥಿನಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ನಗರದ ಪದವಿ ಪೂರ್ವ ಕಾಲೇಜೊಂದರ ವಿದ್ಯಾರ್ಥಿನಿಯು ತರಗತಿಗಳು ಮುಗಿದ ಬಳಿಕ ಸರ್ವಿಸ್ ಬಸ್ ನಿಲ್ದಾಣಕ್ಕೆ ತನ್ನ ಗೆಳೆಯನ ಜೊತೆ ತೆರಳಿದ್ದಳು. ಆಕೆಯ ಗೆಳೆಯ ಮಧ್ಯಾಹ್ನ 3.30ರ ಸುಮಾರಿಗೆ ಬಸ್ನಲ್ಲಿ ಮನೆಗೆ ಹೋಗಿದ್ದ. ಆ ಗೆಳೆಯನ ಬಂಧುವೊಬ್ಬರ ಜೊತೆಗೆ ವಿದ್ಯಾರ್ಥಿನಿ ಮಾತನಾಡುತ್ತಾ ಒಟ್ಟಿಗೆ ನಡೆದುಕೊಂಡು ಹೋಗುತ್ತಿರುವಾಗ ಏಳೆಂಟು ಮಂದಿಯ ಗುಂಪು ಅವರನ್ನು ತಡೆದು ಜಗಳವಾಡಿತ್ತು‘ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮತೀಯ ಗೂಂಡಾಗಿರಿ ನಡೆಸಿದ ಆರೋಪದ ಮೇಲೆ ಆರು ಮಂದಿಯನ್ನು ನಗರದ ಪಾಂಡೇಶ್ವರದ ದಕ್ಷಿಣ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ. </p>.<p>ಗಣೇಶ, ಶ್ರೇಯಸ್, ಚಿಂಟು, ಚಂದನ್, ನಾಗರಾಜ್ ಹಾಗೂ ರಾಮಚಂದ್ರ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಬೇರೆ ಬೇರೆ ಧರ್ಮಕ್ಕೆ ಸೇರಿದ ಯುವಕ ಹಾಗೂ ವಿದ್ಯಾರ್ಥಿನಿ ಸೋಮವಾರ (ಆ 11) ಸಂಜೆ ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳು ತಡೆದು ನಿಲ್ಲಿಸಿದ್ದು, ವಿದ್ಯಾರ್ಥಿನಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ನಗರದ ಪದವಿ ಪೂರ್ವ ಕಾಲೇಜೊಂದರ ವಿದ್ಯಾರ್ಥಿನಿಯು ತರಗತಿಗಳು ಮುಗಿದ ಬಳಿಕ ಸರ್ವಿಸ್ ಬಸ್ ನಿಲ್ದಾಣಕ್ಕೆ ತನ್ನ ಗೆಳೆಯನ ಜೊತೆ ತೆರಳಿದ್ದಳು. ಆಕೆಯ ಗೆಳೆಯ ಮಧ್ಯಾಹ್ನ 3.30ರ ಸುಮಾರಿಗೆ ಬಸ್ನಲ್ಲಿ ಮನೆಗೆ ಹೋಗಿದ್ದ. ಆ ಗೆಳೆಯನ ಬಂಧುವೊಬ್ಬರ ಜೊತೆಗೆ ವಿದ್ಯಾರ್ಥಿನಿ ಮಾತನಾಡುತ್ತಾ ಒಟ್ಟಿಗೆ ನಡೆದುಕೊಂಡು ಹೋಗುತ್ತಿರುವಾಗ ಏಳೆಂಟು ಮಂದಿಯ ಗುಂಪು ಅವರನ್ನು ತಡೆದು ಜಗಳವಾಡಿತ್ತು‘ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>