ಮಂಗಳೂರು: ನಗರದ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಡೆದ ನಾಗಬನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾವೂರಿನ ಸಫ್ವಾನ್, ಪ್ರವೀಣ್ ಅನಿಲ್ ಮೊಂತೇರೊ, ಸೊಹೈಲ್, ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್ ಮತ್ತು ನೌಷಾದ್ ಬಂಧಿತ ಆರೋಪಿಗಳು ಎಂದು ಅವರು ತಿಳಿಸಿದರು.