<p>ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಆಡಳಿತದ ಎನ್ಎಂಪಿಎ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ಬೇರೆ ಶಾಲೆಯ ಜೊತೆ ವಿಲೀನಗೊಳಿಸುವ ಪ್ರಸ್ತಾವ ಕೈಬಿಡಬೇಕು ಎಂದು ಮಾಜಿ ಶಾಸಕ ಬಿ.ಎ.ಮೊಹಿಯುದ್ದೀನ್ ಬಾವ ಒತ್ತಾಯಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ನವ ಮಂಗಳೂರು ಬಂದರಿಗಾಗಿ ಜಮೀನು ನೀಡಿದ್ದ ಕುಟುಂಬಗಳ ಮಕ್ಕಳಿಗೆ ಈ ಶಾಲೆಯು 40 ವರ್ಷಗಳಿಂದ ಶಿಕ್ಷಣ ನೀಡುತ್ತಿದೆ. ಕಾಟಿಪಳ್ಳ, ಕೃಷ್ಣಾಪುರ, ಹೊಸಬೆಟ್ಟು, ಸುರತ್ಕಲ್ ಹಾಗೂ ಚಿತ್ರಾಪುರದ ಬಹಳಷ್ಟು ಮಕ್ಕಳು ಈ ಶಾಲೆಯಲ್ಲಿ ಕಲಿತಿದ್ದಾರೆ. ಈ ಶಾಲೆಯನ್ನು ಬೇರೆ ಶಾಲೆ ಜೊತೆ ವಿಲೀನಗೊಳಿಸಿದರೆ ಹೋರಾಟ ನಡೆಸಬೇಕಾಗುತ್ತದೆ’ ಎಂದರು.</p>.<p>‘ಶಾಲಾ ಶೈಕ್ಷಣಿಕ ವರ್ಷದ ಚಟುವಟಿಕೆ ಶುರುವಾಗಿದೆ. ಆದರೆ, ಇನ್ನೂ ಒಂದನೇ ತರಗತಿಗೆ ಮಕ್ಕಳ ಪ್ರವೇಶ ಪ್ರಕ್ರಿಯೆ ಆರಂಭಿಸಿಲ್ಲ. ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿಗಳು ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಲು ಕ್ರಮವಹಿಸಬೇಕು. ಈಗಾಗಲೇ ಸ್ಥಗಿತಗೊಂಡ ಎಲ್ಕೆಜಿ ಮತ್ತು ಯುಕೆಜಿ. ತರಗತಿಗಳನ್ನು ಪುನರಾರಂಭಿಸಬೇಕು’ ಎಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-126-55664626</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಆಡಳಿತದ ಎನ್ಎಂಪಿಎ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ಬೇರೆ ಶಾಲೆಯ ಜೊತೆ ವಿಲೀನಗೊಳಿಸುವ ಪ್ರಸ್ತಾವ ಕೈಬಿಡಬೇಕು ಎಂದು ಮಾಜಿ ಶಾಸಕ ಬಿ.ಎ.ಮೊಹಿಯುದ್ದೀನ್ ಬಾವ ಒತ್ತಾಯಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ನವ ಮಂಗಳೂರು ಬಂದರಿಗಾಗಿ ಜಮೀನು ನೀಡಿದ್ದ ಕುಟುಂಬಗಳ ಮಕ್ಕಳಿಗೆ ಈ ಶಾಲೆಯು 40 ವರ್ಷಗಳಿಂದ ಶಿಕ್ಷಣ ನೀಡುತ್ತಿದೆ. ಕಾಟಿಪಳ್ಳ, ಕೃಷ್ಣಾಪುರ, ಹೊಸಬೆಟ್ಟು, ಸುರತ್ಕಲ್ ಹಾಗೂ ಚಿತ್ರಾಪುರದ ಬಹಳಷ್ಟು ಮಕ್ಕಳು ಈ ಶಾಲೆಯಲ್ಲಿ ಕಲಿತಿದ್ದಾರೆ. ಈ ಶಾಲೆಯನ್ನು ಬೇರೆ ಶಾಲೆ ಜೊತೆ ವಿಲೀನಗೊಳಿಸಿದರೆ ಹೋರಾಟ ನಡೆಸಬೇಕಾಗುತ್ತದೆ’ ಎಂದರು.</p>.<p>‘ಶಾಲಾ ಶೈಕ್ಷಣಿಕ ವರ್ಷದ ಚಟುವಟಿಕೆ ಶುರುವಾಗಿದೆ. ಆದರೆ, ಇನ್ನೂ ಒಂದನೇ ತರಗತಿಗೆ ಮಕ್ಕಳ ಪ್ರವೇಶ ಪ್ರಕ್ರಿಯೆ ಆರಂಭಿಸಿಲ್ಲ. ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿಗಳು ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಲು ಕ್ರಮವಹಿಸಬೇಕು. ಈಗಾಗಲೇ ಸ್ಥಗಿತಗೊಂಡ ಎಲ್ಕೆಜಿ ಮತ್ತು ಯುಕೆಜಿ. ತರಗತಿಗಳನ್ನು ಪುನರಾರಂಭಿಸಬೇಕು’ ಎಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-126-55664626</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>