<p><strong>ಮಂಗಳೂರು:</strong> ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 30ರ ನಡುವಿನ ಅವಧಿಯಲ್ಲಿ ಕಳ್ಳತನವಾಗಿದ್ದ 233 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್. ಎನ್ ಹೇಳಿದರು. </p>.ಸಂಗತ: ಹೆಚ್ಚುತ್ತಲೇ ಇದೆ ‘ಅಪ್ರಾಮಾಣಿಕತೆಯ ಸೂಚ್ಯಂಕ’.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊಬೈಲ್ ಫೋನ್ ಕಳ್ಳತನದ ಬಗ್ಗೆ ನಿಗಾ ಇಡಲು ಸೆನ್ ಠಾಣೆಯ ಎಸಿಪಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು ಎಂದರು. </p><p>ಮೊಬೈಲ್ ಫೋನ್ ಕಳ್ಳತನವಾದಾಗ, ಸಂಶಯಾಸ್ಪದ ಕರೆಗಳು ಬಂದಾಗ ‘ಸಂಚಾರ್ ಸಾಥಿ’ ಪೋರ್ಟಲ್ ಬಳಸಿಕೊಂಡು ನಂಬರ್ ಅನ್ನು ಬ್ಲಾಕ್ ಮಾಡಿಸಬಹುದು. ಸೈಬರ್ ಅಪರಾಧ ಸಹಾಯವಾಣಿ 1930 ಈ ಸಂಖ್ಯೆಗೆ ಕರೆ ಮಾಡಬಹುದು. </p><p>ಜನರು ಈ ಬಗ್ಗೆ ತಿಳಿವಳಿಕೆ ಹೊಂದಿರಬೇಕು ಎಂದರು.</p>.ಮಂಗಳೂರು | ಉದ್ಯೋಗ ವೀಸಾ ವಂಚನೆ: ಆರೋಪಿಗಳಿಬ್ಬರ ಸೆರೆ.<p>ಇತ್ತೀಚೆಗೆ ಕಾಲ್ ಮರ್ಜಿಂಗ್ ಹೆಸರಿನಲ್ಲಿ ಸೈಬರ್ ವಂಚನೆ ಪ್ರಕರಣಗಳು ಅಲ್ಲಲ್ಲಿ ವರದಿಯಾಗಿವೆ. ಕಾನ್ಪರೆನ್ಸ್ ಕಾಲ್ ಮಾಡಿ, ಮೋಸದಿಂದ ಒಟಿಪಿ ಪಡೆದು ಹಣ ವಂಚನೆ ಮಾಡಿರುವ ಪ್ರಕರಣಗಳು ಬೇರೆ ಕಡೆಗಳಲ್ಲಿ ನಡೆದಿವೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ವರೆಗೆ ಇಂತಹ ಪ್ರಕರಣ ದಾಖಲಾಗಿಲ್ಲ. ಆದರೆ, ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದರು.</p>.ಮಂಗಳೂರು: ನವದೆಹಲಿ, ತಿರುವನಂತಪುರ, ಕೊಲ್ಲಿ ದೇಶಗಳಿಗೆ ವಿಮಾನ ಸೇವೆ ಹೆಚ್ಚಳ.<h2>4793 ಪ್ರಕರಣ: </h2><p>ನಗರದ ರಸ್ತೆಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಮೂರು ಮೂರು ತಿಂಗಳುಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ನೋ ಪಾರ್ಕಿಂಗ್, ಪಾದಚಾರಿ ಮಾರ್ಗದ ಮೇಲೆ ವಾಹನ ನಿಲುಗಡೆ ಸೇರಿದಂತೆ ಅನಧಿಕೃತವಾಗಿ</p><p>ವಾಹನ ನಿಲುಗಡೆ ಮಾಡಿದ್ದ ಮಾಲೀಕ, ಚಾಲಕರ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಿ ₹ 23,21,200 ದಂಡ ವಿಧಿಸಲಾಗಿದೆ ಎಂದು ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ಹೇಳಿದರು. </p><p>ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ, ಹೆಚ್ಚು ಅಪಘಾತಗಳಾಗುವ ಬ್ಲ್ಯಾಕ್ ಸ್ಪಾಟ್ ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ವೇಗವಾಗಿ ಚಾಲನೆ ಮಾಡುವ ವಾಹನಗಳ ವಿರುದ್ಧ ಕ್ರಮ ಕೈಗೊಂಡು 562 ಪ್ರಕರಣಗಳನ್ನು ದಾಖಲಿಸಿ ₹5.62 ಲಕ್ಷ ದಂಡ ವಿಧಿಸಲಾಗಿದೆ. ಟಿಂಟೆಡ್ ಗ್ಲಾಸ್ ಉಪಯೋಗಿಸಿದ 5865 ವಾಹನಗಳನ್ನು ಗುರುತಿಸಿ ₹24.85 ಲಕ್ಷ ದಂಡ ವಿಧಿಸಲಾಗಿದೆ ಎಂದರು.</p> .ಮಂಗಳೂರು | ಚೂರಿಯಿಂದ ಇಬ್ಬರಿಗೆ ಇರಿತ: ನಾಲ್ವರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 30ರ ನಡುವಿನ ಅವಧಿಯಲ್ಲಿ ಕಳ್ಳತನವಾಗಿದ್ದ 233 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್. ಎನ್ ಹೇಳಿದರು. </p>.ಸಂಗತ: ಹೆಚ್ಚುತ್ತಲೇ ಇದೆ ‘ಅಪ್ರಾಮಾಣಿಕತೆಯ ಸೂಚ್ಯಂಕ’.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊಬೈಲ್ ಫೋನ್ ಕಳ್ಳತನದ ಬಗ್ಗೆ ನಿಗಾ ಇಡಲು ಸೆನ್ ಠಾಣೆಯ ಎಸಿಪಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು ಎಂದರು. </p><p>ಮೊಬೈಲ್ ಫೋನ್ ಕಳ್ಳತನವಾದಾಗ, ಸಂಶಯಾಸ್ಪದ ಕರೆಗಳು ಬಂದಾಗ ‘ಸಂಚಾರ್ ಸಾಥಿ’ ಪೋರ್ಟಲ್ ಬಳಸಿಕೊಂಡು ನಂಬರ್ ಅನ್ನು ಬ್ಲಾಕ್ ಮಾಡಿಸಬಹುದು. ಸೈಬರ್ ಅಪರಾಧ ಸಹಾಯವಾಣಿ 1930 ಈ ಸಂಖ್ಯೆಗೆ ಕರೆ ಮಾಡಬಹುದು. </p><p>ಜನರು ಈ ಬಗ್ಗೆ ತಿಳಿವಳಿಕೆ ಹೊಂದಿರಬೇಕು ಎಂದರು.</p>.ಮಂಗಳೂರು | ಉದ್ಯೋಗ ವೀಸಾ ವಂಚನೆ: ಆರೋಪಿಗಳಿಬ್ಬರ ಸೆರೆ.<p>ಇತ್ತೀಚೆಗೆ ಕಾಲ್ ಮರ್ಜಿಂಗ್ ಹೆಸರಿನಲ್ಲಿ ಸೈಬರ್ ವಂಚನೆ ಪ್ರಕರಣಗಳು ಅಲ್ಲಲ್ಲಿ ವರದಿಯಾಗಿವೆ. ಕಾನ್ಪರೆನ್ಸ್ ಕಾಲ್ ಮಾಡಿ, ಮೋಸದಿಂದ ಒಟಿಪಿ ಪಡೆದು ಹಣ ವಂಚನೆ ಮಾಡಿರುವ ಪ್ರಕರಣಗಳು ಬೇರೆ ಕಡೆಗಳಲ್ಲಿ ನಡೆದಿವೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ವರೆಗೆ ಇಂತಹ ಪ್ರಕರಣ ದಾಖಲಾಗಿಲ್ಲ. ಆದರೆ, ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದರು.</p>.ಮಂಗಳೂರು: ನವದೆಹಲಿ, ತಿರುವನಂತಪುರ, ಕೊಲ್ಲಿ ದೇಶಗಳಿಗೆ ವಿಮಾನ ಸೇವೆ ಹೆಚ್ಚಳ.<h2>4793 ಪ್ರಕರಣ: </h2><p>ನಗರದ ರಸ್ತೆಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಮೂರು ಮೂರು ತಿಂಗಳುಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ನೋ ಪಾರ್ಕಿಂಗ್, ಪಾದಚಾರಿ ಮಾರ್ಗದ ಮೇಲೆ ವಾಹನ ನಿಲುಗಡೆ ಸೇರಿದಂತೆ ಅನಧಿಕೃತವಾಗಿ</p><p>ವಾಹನ ನಿಲುಗಡೆ ಮಾಡಿದ್ದ ಮಾಲೀಕ, ಚಾಲಕರ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಿ ₹ 23,21,200 ದಂಡ ವಿಧಿಸಲಾಗಿದೆ ಎಂದು ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ಹೇಳಿದರು. </p><p>ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ, ಹೆಚ್ಚು ಅಪಘಾತಗಳಾಗುವ ಬ್ಲ್ಯಾಕ್ ಸ್ಪಾಟ್ ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ವೇಗವಾಗಿ ಚಾಲನೆ ಮಾಡುವ ವಾಹನಗಳ ವಿರುದ್ಧ ಕ್ರಮ ಕೈಗೊಂಡು 562 ಪ್ರಕರಣಗಳನ್ನು ದಾಖಲಿಸಿ ₹5.62 ಲಕ್ಷ ದಂಡ ವಿಧಿಸಲಾಗಿದೆ. ಟಿಂಟೆಡ್ ಗ್ಲಾಸ್ ಉಪಯೋಗಿಸಿದ 5865 ವಾಹನಗಳನ್ನು ಗುರುತಿಸಿ ₹24.85 ಲಕ್ಷ ದಂಡ ವಿಧಿಸಲಾಗಿದೆ ಎಂದರು.</p> .ಮಂಗಳೂರು | ಚೂರಿಯಿಂದ ಇಬ್ಬರಿಗೆ ಇರಿತ: ನಾಲ್ವರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>