‘ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರು ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ದೇವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ಆಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿತ್ತು. ಪ್ರಭಾ ಅವರು ಯಾವುದೇ ಧರ್ಮಕ್ಕೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿಲ್ಲ. ಈ ಬಗ್ಗೆ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಅವರು ಶಾಲಾ ಆಡಳಿತ ಮಂಡಳಿಯ ಜೊತೆ ವಿಚಾರ ವಿಮರ್ಶೆ ಮಾಡಿಲ್ಲ. ಆದರೂ, ಇದೇ 12 ರಂದು ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಶರಣ್ ಪಂಪ್ವೆಲ್, ಸಂದೀಪ್ ಗರೋಡಿ ಹಾಗೂ ಭರತ್ ಕುಮಾರ್ ಅವರು ಸೇರಿ ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ಶಾಲೆಯ ಗೇಟ್ ಎದುರಿನಲ್ಲಿ ಅಕ್ರಮವಾಗಿ ಸೇರಿ, ‘ಜೈ ಶ್ರೀ ರಾಮ್’ ಎಂಬ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಶಾಲಾ ಆಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ವಿರುದ್ಧ ಮಾತನಾಡಿ ಬೆದರಿಕೆ ಹಾಕಿದ್ದಾರೆ. ಹಿಂದೂ ಮತ್ತು ಕ್ರೈಸ್ತ ಧರ್ಮದ ನಡುವೆ ಕದನ/ಗಲಭೆ ಉಂಟಾಗುವಂತೆ ಪ್ರಚೋದಿಸಿ ಮಾತನಾಡಿದ್ದಾರೆ. ಕೋಮು ಸೂಕ್ಷವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವ ಶಾಂತಿ ಮತ್ತು ನೆಮ್ಮದಿಗೆ ಭಂಗ ತರಲು ಬಯಸಿದ್ದಾರೆ’ ಎಂದು ಅನಿಲ್ ಲೋಬೊ ಅವರು ದೂರಿನಲ್ಲಿ ಆರೋಪಿಸಿದ್ದಾರೆ.