9ರಂದು ಬೆಳಿಗ್ಗೆ 9 ಗಂಟೆಗೆ ಟೂರ್ನಿಯನ್ನು ಶಾಸಕ ಮಂಜುನಾಥ ಭಂಡಾರಿ ಮತ್ತು ಅಡ್ಯಾರ್ ಗಾರ್ಡನ್ ಮಾಲೀಕ ಕಿಶನ್ ಶೆಟ್ಟಿ ಉದ್ಘಾಟಿಸುವರು. ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮದಲ್ಲಿ ಎಂಆರ್ಜಿ ಗ್ರೂಪ್ಸ್ನ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸಂಸದರು ಮತ್ತು ಶಾಕಸರು ಪಾಲ್ಗೊಳ್ಳಲಿದ್ದಾರೆ. 10ರಂದು ರಾತ್ರಿ 9 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.