ಶೈಕ್ಷಣಿಕ ವರ್ಷ ಆರಂಭದ ಮೊದಲ ದಿನ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳಲ್ಲಿ ಶೇ 85ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇ 75ರಷ್ಟು ಹಾಗೂ ಕೊಡಗು ಜಿಲ್ಲೆಯಲ್ಲಿ ಶೇ 50ರಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು. ಎನ್ಇಪಿ ಹೊಸದಾಗಿ ಅನುಷ್ಠಾನಗೊಂಡಿರುವ ಕಾರಣ ಕಾಲೇಜುಗಳ ಪ್ರಮುಖರಿಗೆ ಅನುಮಾನಗಳಿದ್ದಲ್ಲಿ ಬಗೆಹರಿಸಲು, ಇಬ್ಬರು ಪ್ರಾಧ್ಯಾಪಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕಿಶೋರ್ಕುಮಾರ್ ತಿಳಿಸಿದರು.