ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಘಟನಾವಳಿಯ ವಿಡಿಯೊಗಳನ್ನು ಹಾಜರುಪಡಿಸಲು ಮಂಗಳೂರು ಪೊಲೀಸ್ ಆಯುಕ್ತರಿಗೆ ತಿಳಿವಳಿಕೆ ಪತ್ರ ಬರೆಯಲಾಗಿತ್ತು. ಅದರಂತೆ 50 ವಿಡಿಯೊ ದೃಶ್ಯಾವಳಿ ಇರುವ ಪೆನ್ಡ್ರೈವ್ ಅನ್ನು ಪೊಲೀಸರು ಹಾಜರುಪಡಿಸಿದ್ದಾರೆ. ತನಿಖಾ ಉದ್ದೇಶದಿಂದ ಪೊಲೀಸರು ವಶಕ್ಕೆ ಪಡೆದಿದ್ದ 20 ಡಿವಿಆರ್ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರ ಸ್ವೀಕೃತಿಯನ್ನು ಪೊಲೀಸ್ ನೋಡಲ್ ಅಧಿಕಾರಿಯಾಗಿರುವ ಎಸಿಪಿ ಬೆಳ್ಳಿಯಪ್ಪ ಹಾಜರುಪಡಿಸಿದ್ದಾರೆ’ ಎಂದು ತಿಳಿಸಿದರು.