ಟ್ರಸ್ಟಿ ತಾರನಾಥ ಕೊಟ್ಟಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೀತಾ ಪುರುಷೋತ್ತಮ್ ಬಳಗದವರು ಪ್ರಾರ್ಥಿಸಿದರು. ಟ್ರಸ್ಟಿ ಪುರುಷೋತ್ತಮ ಚೇಂಡ್ಲ ಬೆಂಗಳೂರು ಸ್ವಾಗತಿಸಿದರು. ಟ್ರಸ್ಟಿ ಮಂಜು ವಿಟ್ಲ ಸನ್ಮಾನ ಪತ್ರ ವಾಚಿಸಿದರು. ಟ್ರಸ್ಟಿ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ವಂದಿಸಿದರು.
ಧಾರ್ಮಿಕ ಕಾರ್ಯಕ್ರಮ: ಬೆಳಿಗ್ಗೆ ಚಂಡಿಕಾಯಾಗ, ವಿಠಲಯಾಗ, ಮಧ್ಯಾಹ್ನ ಪೂರ್ಣಾಹುತಿ, ಪ್ರತಿಷ್ಠಾವರ್ಧಂತ್ಯುತ್ಸವ, ಪ್ರಸನ್ನ ಮಹಾಪೂಜೆ, ಮಂತ್ರಾಕ್ಷತೆ ನಡೆದು, ಅನ್ನಸಂತರ್ಪಣೆ ನಡೆಯಿತು. ರಾತ್ರಿ ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ ನಡೆಯಿತು. ಬಳಿಕ ಕಟೀಲು ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಿತು.