<p><strong>ವಿಟ್ಲ:</strong> ‘ತಾಯಿಯಂದಿರನ್ನು ಗೌರವಿಸುವ ಸಂಸ್ಕೃತಿ ನಮ್ಮದಾಗಬೇಕು. ಯಾವುದನ್ನೂ ಅಪೇಕ್ಷೆಪಡುವ ಮನಸ್ಸು ಸಂತರಿಗೆ ಇರಬಾರದು. ಸಮರ್ಪಣಾ ಭಾವದಿಂದ ಕೆಲಸ ಮಾಡಿದಾಗ ಯಶಸ್ಸು ಖಂಡಿತ ಲಭಿಸುವುದು’ ಎಂದು ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.<br /><br />ಮಾಣಿಲ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ ಬುಧವಾರ ನಡೆದ ಧರ್ಮ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.<br /><br />ಶ್ರೀಕ್ಷೇತ್ರ ಕಟೀಲಿನ ಆನುವಂಶಿಕ ಪ್ರಧಾನ ಅರ್ಚಕ ಕಮಲಾದೇವಿಪ್ರಸಾದ ಅಸ್ರಣ್ಣ ಆಶೀರ್ವಚನ ನೀಡಿ, ‘ತಾವು ತಮ್ಮವರೆಂಬ ಭಾವದಿಂದ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಮಾಣಿಲ ಶ್ರೀಗಳಿಗಿದೆ. ದೇಶ ಕಟ್ಟುವ ಕಾರ್ಯ ಧಾರ್ಮಿಕ ಕೇಂದ್ರಗಳಿಂದ ಸಾಧ್ಯ’ ಎಂದರು.<br /><br />ಆಸರೆ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷೆ ಡಾ ಆಶಾ ಜ್ಯೋತಿ ರೈ ಮಾಲಾಡಿ, ಧಾರ್ಮಿಕ ನೇತಾರ ವಿಜಯಾನಂದ ಜೋಗಿ, ಬೆಂಗಳೂರಿನ ಉದ್ಯಮಿ ಲೊಕೇಶ್, ಧಾರ್ಮಿಕ ಮುಂದಾಳು ಕೈಯೂರು ನಾರಾಯಣ ಭಟ್, ಉದ್ಯಮಿ ಶ್ರಿನಿವಾಸ್ ಶೇಟ್, ಮಹಿಳಾ ಸಮಿತಿ ಅಧ್ಯಕ್ಷೆ ವನಿತಾ ಶೆಟ್ಟಿ ಉಪಸ್ಥಿತರಿದ್ದರು.</p>.<p>ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಕುಮಿ ತಂಡದ ಕಲಾವಿದ ಹೆಚ್ಕೆ ನಯನಾಡು ಅವರನ್ನು ಸನ್ಮಾನಿಸಲಾಯಿತು.</p>.<p>ಟ್ರಸ್ಟಿ ತಾರನಾಥ ಕೊಟ್ಟಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೀತಾ ಪುರುಷೋತ್ತಮ್ ಬಳಗದವರು ಪ್ರಾರ್ಥಿಸಿದರು. ಟ್ರಸ್ಟಿ ಪುರುಷೋತ್ತಮ ಚೇಂಡ್ಲ ಬೆಂಗಳೂರು ಸ್ವಾಗತಿಸಿದರು. ಟ್ರಸ್ಟಿ ಮಂಜು ವಿಟ್ಲ ಸನ್ಮಾನ ಪತ್ರ ವಾಚಿಸಿದರು. ಟ್ರಸ್ಟಿ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ವಂದಿಸಿದರು.<br /><br /><strong>ಧಾರ್ಮಿಕ ಕಾರ್ಯಕ್ರಮ</strong>: ಬೆಳಿಗ್ಗೆ ಚಂಡಿಕಾಯಾಗ, ವಿಠಲಯಾಗ, ಮಧ್ಯಾಹ್ನ ಪೂರ್ಣಾಹುತಿ, ಪ್ರತಿಷ್ಠಾವರ್ಧಂತ್ಯುತ್ಸವ, ಪ್ರಸನ್ನ ಮಹಾಪೂಜೆ, ಮಂತ್ರಾಕ್ಷತೆ ನಡೆದು, ಅನ್ನಸಂತರ್ಪಣೆ ನಡೆಯಿತು. ರಾತ್ರಿ ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ ನಡೆಯಿತು. ಬಳಿಕ ಕಟೀಲು ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ:</strong> ‘ತಾಯಿಯಂದಿರನ್ನು ಗೌರವಿಸುವ ಸಂಸ್ಕೃತಿ ನಮ್ಮದಾಗಬೇಕು. ಯಾವುದನ್ನೂ ಅಪೇಕ್ಷೆಪಡುವ ಮನಸ್ಸು ಸಂತರಿಗೆ ಇರಬಾರದು. ಸಮರ್ಪಣಾ ಭಾವದಿಂದ ಕೆಲಸ ಮಾಡಿದಾಗ ಯಶಸ್ಸು ಖಂಡಿತ ಲಭಿಸುವುದು’ ಎಂದು ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.<br /><br />ಮಾಣಿಲ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ ಬುಧವಾರ ನಡೆದ ಧರ್ಮ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.<br /><br />ಶ್ರೀಕ್ಷೇತ್ರ ಕಟೀಲಿನ ಆನುವಂಶಿಕ ಪ್ರಧಾನ ಅರ್ಚಕ ಕಮಲಾದೇವಿಪ್ರಸಾದ ಅಸ್ರಣ್ಣ ಆಶೀರ್ವಚನ ನೀಡಿ, ‘ತಾವು ತಮ್ಮವರೆಂಬ ಭಾವದಿಂದ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಮಾಣಿಲ ಶ್ರೀಗಳಿಗಿದೆ. ದೇಶ ಕಟ್ಟುವ ಕಾರ್ಯ ಧಾರ್ಮಿಕ ಕೇಂದ್ರಗಳಿಂದ ಸಾಧ್ಯ’ ಎಂದರು.<br /><br />ಆಸರೆ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷೆ ಡಾ ಆಶಾ ಜ್ಯೋತಿ ರೈ ಮಾಲಾಡಿ, ಧಾರ್ಮಿಕ ನೇತಾರ ವಿಜಯಾನಂದ ಜೋಗಿ, ಬೆಂಗಳೂರಿನ ಉದ್ಯಮಿ ಲೊಕೇಶ್, ಧಾರ್ಮಿಕ ಮುಂದಾಳು ಕೈಯೂರು ನಾರಾಯಣ ಭಟ್, ಉದ್ಯಮಿ ಶ್ರಿನಿವಾಸ್ ಶೇಟ್, ಮಹಿಳಾ ಸಮಿತಿ ಅಧ್ಯಕ್ಷೆ ವನಿತಾ ಶೆಟ್ಟಿ ಉಪಸ್ಥಿತರಿದ್ದರು.</p>.<p>ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಕುಮಿ ತಂಡದ ಕಲಾವಿದ ಹೆಚ್ಕೆ ನಯನಾಡು ಅವರನ್ನು ಸನ್ಮಾನಿಸಲಾಯಿತು.</p>.<p>ಟ್ರಸ್ಟಿ ತಾರನಾಥ ಕೊಟ್ಟಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೀತಾ ಪುರುಷೋತ್ತಮ್ ಬಳಗದವರು ಪ್ರಾರ್ಥಿಸಿದರು. ಟ್ರಸ್ಟಿ ಪುರುಷೋತ್ತಮ ಚೇಂಡ್ಲ ಬೆಂಗಳೂರು ಸ್ವಾಗತಿಸಿದರು. ಟ್ರಸ್ಟಿ ಮಂಜು ವಿಟ್ಲ ಸನ್ಮಾನ ಪತ್ರ ವಾಚಿಸಿದರು. ಟ್ರಸ್ಟಿ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ವಂದಿಸಿದರು.<br /><br /><strong>ಧಾರ್ಮಿಕ ಕಾರ್ಯಕ್ರಮ</strong>: ಬೆಳಿಗ್ಗೆ ಚಂಡಿಕಾಯಾಗ, ವಿಠಲಯಾಗ, ಮಧ್ಯಾಹ್ನ ಪೂರ್ಣಾಹುತಿ, ಪ್ರತಿಷ್ಠಾವರ್ಧಂತ್ಯುತ್ಸವ, ಪ್ರಸನ್ನ ಮಹಾಪೂಜೆ, ಮಂತ್ರಾಕ್ಷತೆ ನಡೆದು, ಅನ್ನಸಂತರ್ಪಣೆ ನಡೆಯಿತು. ರಾತ್ರಿ ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ ನಡೆಯಿತು. ಬಳಿಕ ಕಟೀಲು ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>