ಕೇರಳದಿಂದ ಬಂದಿರುವ 50 ಜನರು ಮಾರಕಾಸ್ತ್ರಗಳನ್ನು ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದರು. ಆದರೆ, ಅವರು ಮಾರಕಾಸ್ತ್ರಗಳನ್ನು ಹೊಂದಿರಲಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.ನಿನ್ನೆ ನಡೆದ ಗೋಲೀಬಾರ್ನಲ್ಲಿ ಮೃತಪಟ್ಟವರ ಶವಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮೃತಪಟ್ಟವರ ಸಂಬಂಧಿಗಳ ಸಂದರ್ಶನ ನಡೆಸಲು ಮಾಧ್ಯಮ ಪ್ರತಿನಿಧಿಗಳು ಬಂದಿದ್ದರು ಎನ್ನಲಾಗಿದೆ.