<p><strong>ಮಂಗಳೂರು</strong>: ಶಿವಾಜಿ ಜಯಂತಿಯ ಪ್ರಯುಕ್ತ ಬಜಾಲ್ ಜಲ್ಲಿಗುಡ್ಡೆಯ ಅಂಬಾಭವಾನಿ ಗೇಮ್ಸ್ ಟೀಮ್ ವತಿಯಿಂದ ಸಮಾಜದ ಪುರುಷರಿಗಾಗಿ ‘ಮರಾಠ ಟ್ರೋಪಿ 2024’ ಕ್ರಿಕೆಟ್ ಹಾಗೂ ಮಹಿಳೆಯರಿಗಾಗಿ ಥ್ರೋಬಾಲ್ ಪಂದ್ಯಾಟವನ್ನು ಇದೇ 3 ಮತ್ತು 4ರಂದು ನಗರದ ನೆಹರೂ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಅಂಬಾ ಭವಾನಿ ಭಜನಾ ಮಂಡಳಿಯ ಅಧ್ಯಕ್ಷ ಸುಧಾಕರ ರಾವ್ ಪಾಟೀಲ ತಿಳಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ ಐಪಿಎಲ್ ಮಾದರಿಯಲ್ಲಿ ನಡೆಯುವ ಈ ಕ್ರಿಕೆಟ್ ಟೂರ್ನಿಯಲ್ಲಿ ಮಂಗಳೂರು, ಕಾಸರಗೋಡು ಮತ್ತು ಉಡುಪಿ ಜಿಲ್ಲೆಗಳ ಎಂಟು ತಂಡಗಳು ಭಾಗವಹಿಸಲಿವೆ. ಚಾಂಪಿಯನ್ ಆಗಿ ಹೊರಹೊಮ್ಮುವ ತಂಡ ಟ್ರೋಫಿ ಹಾಗೂ ₹ 1 ಲಕ್ಷ ನಗದು, ರನ್ನರ್ಅಪ್ ತಂಡವು ಟ್ರೋಫಿ ಮತ್ತು ₹ 50 ಸಾವಿರ, ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಗಳಯ ಟ್ರೋಪಿಯನ್ನು ಪಡೆಯಲಿವೆ. ಉತ್ತಮ ದಾಂಡಿಗ, ಉತ್ತಮ ಎಸೆತಗಾರ, ಉತ್ತಮ ಹಿಡಿತಗಾರ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ತ್ರೋಬಾಲ್ ಪಂದ್ಯಾಟದ ವಿಜೇತ ತಂಡಕ್ಕೆ ₹ 10ಸಾವಿರ ನಗದು ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ ₹ 5 ಸಾವಿರ ಮತ್ತು ಟ್ರೋಫಿ, ಮೂರನೇ ಮತ್ತು ನಾಲ್ಕನೇ ಬಹುಮಾನ ಪಡೆದವರಿಗೆ ಟ್ರೋಫಿ ನೀಡಲಾಗುತ್ತದೆ’ ಎಂದರು. </p>.<p>ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಕ್ರೀಡಾಕೂಟವನ್ನು ಶನಿವಾರ ಬೆಳಿಗ್ಗೆ 8.30ಕ್ಕೆ ಉದ್ಘಾಟಿಸುವರು. ಇದೇ ಭಾನುವಾರ ಸಂಜೆ ನಡೆಯುವ ಸಮಾರೋಪದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ಭಾಗವಹಿಸುವರು ಎಂದರು.</p>.<p>ಸಂಸ್ಥೆಯ ಪದಾಧಿಕಾರಿಗಳಾದ ನಿಖಿಲ್ ಜಾಧವ್, ದೇವಿಪ್ರಸಾದ್ ರಾವ್, ಗಣೇಶ ಪವಾರ್, ಜೀವನ್ ಜಗತಾಪ, ಗೋಕುಲ್ ಲಾಡ, ಅನುರಾಜ್, ಹೃತಿಕ್ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಶಿವಾಜಿ ಜಯಂತಿಯ ಪ್ರಯುಕ್ತ ಬಜಾಲ್ ಜಲ್ಲಿಗುಡ್ಡೆಯ ಅಂಬಾಭವಾನಿ ಗೇಮ್ಸ್ ಟೀಮ್ ವತಿಯಿಂದ ಸಮಾಜದ ಪುರುಷರಿಗಾಗಿ ‘ಮರಾಠ ಟ್ರೋಪಿ 2024’ ಕ್ರಿಕೆಟ್ ಹಾಗೂ ಮಹಿಳೆಯರಿಗಾಗಿ ಥ್ರೋಬಾಲ್ ಪಂದ್ಯಾಟವನ್ನು ಇದೇ 3 ಮತ್ತು 4ರಂದು ನಗರದ ನೆಹರೂ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಅಂಬಾ ಭವಾನಿ ಭಜನಾ ಮಂಡಳಿಯ ಅಧ್ಯಕ್ಷ ಸುಧಾಕರ ರಾವ್ ಪಾಟೀಲ ತಿಳಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ ಐಪಿಎಲ್ ಮಾದರಿಯಲ್ಲಿ ನಡೆಯುವ ಈ ಕ್ರಿಕೆಟ್ ಟೂರ್ನಿಯಲ್ಲಿ ಮಂಗಳೂರು, ಕಾಸರಗೋಡು ಮತ್ತು ಉಡುಪಿ ಜಿಲ್ಲೆಗಳ ಎಂಟು ತಂಡಗಳು ಭಾಗವಹಿಸಲಿವೆ. ಚಾಂಪಿಯನ್ ಆಗಿ ಹೊರಹೊಮ್ಮುವ ತಂಡ ಟ್ರೋಫಿ ಹಾಗೂ ₹ 1 ಲಕ್ಷ ನಗದು, ರನ್ನರ್ಅಪ್ ತಂಡವು ಟ್ರೋಫಿ ಮತ್ತು ₹ 50 ಸಾವಿರ, ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಗಳಯ ಟ್ರೋಪಿಯನ್ನು ಪಡೆಯಲಿವೆ. ಉತ್ತಮ ದಾಂಡಿಗ, ಉತ್ತಮ ಎಸೆತಗಾರ, ಉತ್ತಮ ಹಿಡಿತಗಾರ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ತ್ರೋಬಾಲ್ ಪಂದ್ಯಾಟದ ವಿಜೇತ ತಂಡಕ್ಕೆ ₹ 10ಸಾವಿರ ನಗದು ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ ₹ 5 ಸಾವಿರ ಮತ್ತು ಟ್ರೋಫಿ, ಮೂರನೇ ಮತ್ತು ನಾಲ್ಕನೇ ಬಹುಮಾನ ಪಡೆದವರಿಗೆ ಟ್ರೋಫಿ ನೀಡಲಾಗುತ್ತದೆ’ ಎಂದರು. </p>.<p>ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಕ್ರೀಡಾಕೂಟವನ್ನು ಶನಿವಾರ ಬೆಳಿಗ್ಗೆ 8.30ಕ್ಕೆ ಉದ್ಘಾಟಿಸುವರು. ಇದೇ ಭಾನುವಾರ ಸಂಜೆ ನಡೆಯುವ ಸಮಾರೋಪದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ಭಾಗವಹಿಸುವರು ಎಂದರು.</p>.<p>ಸಂಸ್ಥೆಯ ಪದಾಧಿಕಾರಿಗಳಾದ ನಿಖಿಲ್ ಜಾಧವ್, ದೇವಿಪ್ರಸಾದ್ ರಾವ್, ಗಣೇಶ ಪವಾರ್, ಜೀವನ್ ಜಗತಾಪ, ಗೋಕುಲ್ ಲಾಡ, ಅನುರಾಜ್, ಹೃತಿಕ್ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>