ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕ ವೇದವ್ಯಾಸ್ ಕಾಮತ್, ಉಪ ಮೇಯರ್ ಸುಮಂಗಳಾ ರಾವ್, ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಮುಖ್ಯ ಸಚೇತಕ ಸುಧೀರ್ ಶೆಟ್ಟಿ, ಪಾಲಿಕೆ ಸದಸ್ಯರು, ಅಧಿಕಾರಿ ಮತ್ತು ಸಿಬ್ಬಂದಿ ಮತ್ತು ಪೌರಕಾರ್ಮಿಕರು ಹಾಗೂ ವಿವಿಧ ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದರು.