<p><strong>ಮಂಗಳೂರು</strong>: ನಗರದ ಕೊಡಿಯಾಲ್ಬೈಲ್ನ ಕರ್ನಾಟಕ ಬ್ಯಾಂಕ್ನ ಬ್ಯಾಂಕಿನ ಹಳೆಯ ಮುಖ್ಯ ಕಚೇರಿ ಸಂಕೀರ್ಣದಲ್ಲಿ ಯಾಂತ್ರಿಕವಾಗಿ ಕಾರ್ಯನಿರ್ವಹಿಸುವ ಎರಡು ಹಂತದ ಕಾರ್ ಪಾರ್ಕಿಂಗ್ ಸೌಲಭ್ಯವನ್ನು ಆರಂಭಿಸಿದೆ. ಒಟ್ಟು 36 ಕಾರ್ ಪಾರ್ಕಿಂಗ್ ಸ್ಲಾಟ್ಗಳಲ್ಲಿ, 18 ಘಟಕಗಳು ನೆಲಮಟ್ಟದಲ್ಲಿವೆ. ಇನ್ನೂ 18 ಘಟಕಗಳು ಮೊದಲ ಹಂತದಲ್ಲಿವೆ.</p>.<p>ಹೊಸ ಸೌಲಭ್ಯವನ್ನು ಉದ್ಘಾಟಿಸಿದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್., ‘ಲಭ್ಯವಿರುವ ಪಾರ್ಕಿಂಗ್ ಸ್ಥಳವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಇದು ಮುಂದಾಲೋಚನೆಯಾಗಿದೆ. ನಗರದ ಈ ಜನನಿಬಿಡ ಸ್ಥಳದಲ್ಲಿ ಹೆಚ್ಚುತ್ತಿರುವ ವಾಹನಗಳ ಪ್ರಮಾಣ ಮತ್ತು ವಿಸ್ತರಣೆಯ ಸ್ಥಳದ ಮಿತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮರ್ಥ್ಯದ ಬಳಕೆಯಲ್ಲಿ ನಾವು ಒಂದು ಹೆಜ್ಜೆ ಮುಂದಿದ್ದೇವೆ’ ಎಂದು ಹೇಳಿದರು.</p>.<p>ಇದು ದೀರ್ಘಾವಧಿಯಲ್ಲಿ ಪರಿಣಾಮಕಾರಿ ಆಗಲಿದೆ. ಮಂಗಳೂರಿನಲ್ಲಿ ಈ ಸೌಲಭ್ಯವನ್ನು ಆರಂಭಿಸಿದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆ ನಮ್ಮದಾಗಿದೆ. ಪಾರ್ಕಿಂಗ್ ಸ್ಥಳವನ್ನು ಪರಿಣಾಮಕಾರಿಯಾಗಿ ಬಳಸಲು ಇತರ ಕಾರ್ಪೊರೇಟ್ ಸಂಸ್ಥೆಗಳಿಗೆ ಒಂದು ಉದಾಹರಣೆಯನ್ನು ನೀಡಿದಂತಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಸಮಾರಂಭದಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಾಲಚಂದ್ರ ವೈ.ವಿ., ಮುಖ್ಯ ವ್ಯವಹಾರ ಅಧಿಕಾರಿ ಗೋಕುಲದಾಸ್ ಪೈ, ಮಹಾಪ್ರಬಂಧಕ ಮುರಳೀಧರ್ ಕೃಷ್ಣ ರಾವ್, ಕಾರ್ಯನಿರ್ವಾಹಕ ಅಧಿಕಾರಿಗಳು, ಸಿಬ್ಬಂದಿ, ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಗರದ ಕೊಡಿಯಾಲ್ಬೈಲ್ನ ಕರ್ನಾಟಕ ಬ್ಯಾಂಕ್ನ ಬ್ಯಾಂಕಿನ ಹಳೆಯ ಮುಖ್ಯ ಕಚೇರಿ ಸಂಕೀರ್ಣದಲ್ಲಿ ಯಾಂತ್ರಿಕವಾಗಿ ಕಾರ್ಯನಿರ್ವಹಿಸುವ ಎರಡು ಹಂತದ ಕಾರ್ ಪಾರ್ಕಿಂಗ್ ಸೌಲಭ್ಯವನ್ನು ಆರಂಭಿಸಿದೆ. ಒಟ್ಟು 36 ಕಾರ್ ಪಾರ್ಕಿಂಗ್ ಸ್ಲಾಟ್ಗಳಲ್ಲಿ, 18 ಘಟಕಗಳು ನೆಲಮಟ್ಟದಲ್ಲಿವೆ. ಇನ್ನೂ 18 ಘಟಕಗಳು ಮೊದಲ ಹಂತದಲ್ಲಿವೆ.</p>.<p>ಹೊಸ ಸೌಲಭ್ಯವನ್ನು ಉದ್ಘಾಟಿಸಿದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್., ‘ಲಭ್ಯವಿರುವ ಪಾರ್ಕಿಂಗ್ ಸ್ಥಳವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಇದು ಮುಂದಾಲೋಚನೆಯಾಗಿದೆ. ನಗರದ ಈ ಜನನಿಬಿಡ ಸ್ಥಳದಲ್ಲಿ ಹೆಚ್ಚುತ್ತಿರುವ ವಾಹನಗಳ ಪ್ರಮಾಣ ಮತ್ತು ವಿಸ್ತರಣೆಯ ಸ್ಥಳದ ಮಿತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮರ್ಥ್ಯದ ಬಳಕೆಯಲ್ಲಿ ನಾವು ಒಂದು ಹೆಜ್ಜೆ ಮುಂದಿದ್ದೇವೆ’ ಎಂದು ಹೇಳಿದರು.</p>.<p>ಇದು ದೀರ್ಘಾವಧಿಯಲ್ಲಿ ಪರಿಣಾಮಕಾರಿ ಆಗಲಿದೆ. ಮಂಗಳೂರಿನಲ್ಲಿ ಈ ಸೌಲಭ್ಯವನ್ನು ಆರಂಭಿಸಿದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆ ನಮ್ಮದಾಗಿದೆ. ಪಾರ್ಕಿಂಗ್ ಸ್ಥಳವನ್ನು ಪರಿಣಾಮಕಾರಿಯಾಗಿ ಬಳಸಲು ಇತರ ಕಾರ್ಪೊರೇಟ್ ಸಂಸ್ಥೆಗಳಿಗೆ ಒಂದು ಉದಾಹರಣೆಯನ್ನು ನೀಡಿದಂತಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಸಮಾರಂಭದಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಾಲಚಂದ್ರ ವೈ.ವಿ., ಮುಖ್ಯ ವ್ಯವಹಾರ ಅಧಿಕಾರಿ ಗೋಕುಲದಾಸ್ ಪೈ, ಮಹಾಪ್ರಬಂಧಕ ಮುರಳೀಧರ್ ಕೃಷ್ಣ ರಾವ್, ಕಾರ್ಯನಿರ್ವಾಹಕ ಅಧಿಕಾರಿಗಳು, ಸಿಬ್ಬಂದಿ, ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>