<p><strong>ಮಂಗಳೂರು:</strong> ಪಣಂಬೂರು ಠಾಣಾ ವ್ಯಾಪ್ತಿಯ ಮೀನಕಳಿಯ ಪ್ರದೇಶದಿಂದ ಈಚೆಗೆ ನಾಪತ್ತೆಯಾಗಿದ್ದ 16 ವರ್ಷದ ಬಾಲಕಿ ಪತ್ತೆಯಾಗಿದ್ದಾಳೆ. ಬಾಲಕಿಯು ಮನೆಗೆ ಮರಳುವುದಕ್ಕೆ ಒಪ್ಪದ ಕಾರಣ ಪೊಲೀಸರು ಆಕೆಯನ್ನು ಬಾಲಿಕಾ ಮಂದಿರಕ್ಕೆ ಸೇರಿಸಿದ್ದಾರೆ. </p>.<p>ಬಾಲಕಿಯ ನಾಪತ್ತೆ ಪ್ರಕರಣ ಕೆಲವು ಸಂದೇಹಗಳನ್ನು ಹುಟ್ಟುಹಾಕಿತ್ತು. ಆಕೆಯ ಅಪಹರಣ ನಡೆದಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿತ್ತು. ಪೋಷಕರು ನೀಡಿದ ದೂರಿನ ಅನ್ವಯ ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಅಪಹರಣ ಪ್ರಕರಣವು ದಾಖಲಾಗಿತ್ತು.</p>.<p>‘ಪಣಂಬೂರು ಠಾಣಾ ವ್ಯಾಪ್ತಿಯ ಮೀನಕಳಿಯ ಪ್ರದೇಶದಲ್ಲಿ ಹದಿಹರೆಯದ ಬಾಲಕಿಯರನ್ನು ಹಾಗೂ ಮಹಿಳೆಯರನ್ನು ಚುಡಾಯಿಸುವ ಬಗ್ಗೆ ಅನೇಕ ದೂರುಗಳು ಬಂದಿವೆ. ಹಾಗಾಗಿ ಈ ಪ್ರದೇಶದಲ್ಲಿ ಇಲಾಖೆಯ 112 ವಾಹನಗಳ ಓಡಾಟ ಹಾಗೂ ಗಸ್ತನ್ನು ಹೆಚ್ಚಿಸಲಾಗಿದೆ. ಈ ಪ್ರದೇಶದ ರಸ್ತೆಗಳು ಕತ್ತಲಿನಿಂದ ಕೂಡಿದ್ದು, ಇಲ್ಲಿ ಬೀದಿ ದೀಪ ಅಳವಡಿಸಲು ಕ್ರಮವಹಿಸುವಂತೆ ನವಮಂಗಳೂರು ಬಂದರು ಪ್ರಾಧಿಕಾರಕ್ಕೂ ಪತ್ರ ಬರೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಮಹಿಳೆಯರನ್ನು ಅಥವಾ ಬಾಲಕಿಯರನ್ನು ಚುಡಾಯಿಸುವ ಪ್ರಕರಣಗಳು ಮರುಕಳಿಸಿದರೆ ಮಾಹಿತಿ ನೀಡಲು ಸ್ಥಳೀಯ ನಿವಾಸಿಗಳನ್ನು ಒಳಗೊಂಡ ವಾಟ್ಸ್ಆ್ಯಪ್ ಗ್ರೂಪ್ಗಳನ್ನೂ ರಚಿಸಿದ್ದೇವೆ. ಸಂಜೆ ವೇಳೆ ಇಲಾಖೆ 112 ವಾಹನದ ಗಸ್ತನ್ನು ಹೆಚ್ಚಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಪಣಂಬೂರು ಠಾಣಾ ವ್ಯಾಪ್ತಿಯ ಮೀನಕಳಿಯ ಪ್ರದೇಶದಿಂದ ಈಚೆಗೆ ನಾಪತ್ತೆಯಾಗಿದ್ದ 16 ವರ್ಷದ ಬಾಲಕಿ ಪತ್ತೆಯಾಗಿದ್ದಾಳೆ. ಬಾಲಕಿಯು ಮನೆಗೆ ಮರಳುವುದಕ್ಕೆ ಒಪ್ಪದ ಕಾರಣ ಪೊಲೀಸರು ಆಕೆಯನ್ನು ಬಾಲಿಕಾ ಮಂದಿರಕ್ಕೆ ಸೇರಿಸಿದ್ದಾರೆ. </p>.<p>ಬಾಲಕಿಯ ನಾಪತ್ತೆ ಪ್ರಕರಣ ಕೆಲವು ಸಂದೇಹಗಳನ್ನು ಹುಟ್ಟುಹಾಕಿತ್ತು. ಆಕೆಯ ಅಪಹರಣ ನಡೆದಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿತ್ತು. ಪೋಷಕರು ನೀಡಿದ ದೂರಿನ ಅನ್ವಯ ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಅಪಹರಣ ಪ್ರಕರಣವು ದಾಖಲಾಗಿತ್ತು.</p>.<p>‘ಪಣಂಬೂರು ಠಾಣಾ ವ್ಯಾಪ್ತಿಯ ಮೀನಕಳಿಯ ಪ್ರದೇಶದಲ್ಲಿ ಹದಿಹರೆಯದ ಬಾಲಕಿಯರನ್ನು ಹಾಗೂ ಮಹಿಳೆಯರನ್ನು ಚುಡಾಯಿಸುವ ಬಗ್ಗೆ ಅನೇಕ ದೂರುಗಳು ಬಂದಿವೆ. ಹಾಗಾಗಿ ಈ ಪ್ರದೇಶದಲ್ಲಿ ಇಲಾಖೆಯ 112 ವಾಹನಗಳ ಓಡಾಟ ಹಾಗೂ ಗಸ್ತನ್ನು ಹೆಚ್ಚಿಸಲಾಗಿದೆ. ಈ ಪ್ರದೇಶದ ರಸ್ತೆಗಳು ಕತ್ತಲಿನಿಂದ ಕೂಡಿದ್ದು, ಇಲ್ಲಿ ಬೀದಿ ದೀಪ ಅಳವಡಿಸಲು ಕ್ರಮವಹಿಸುವಂತೆ ನವಮಂಗಳೂರು ಬಂದರು ಪ್ರಾಧಿಕಾರಕ್ಕೂ ಪತ್ರ ಬರೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಮಹಿಳೆಯರನ್ನು ಅಥವಾ ಬಾಲಕಿಯರನ್ನು ಚುಡಾಯಿಸುವ ಪ್ರಕರಣಗಳು ಮರುಕಳಿಸಿದರೆ ಮಾಹಿತಿ ನೀಡಲು ಸ್ಥಳೀಯ ನಿವಾಸಿಗಳನ್ನು ಒಳಗೊಂಡ ವಾಟ್ಸ್ಆ್ಯಪ್ ಗ್ರೂಪ್ಗಳನ್ನೂ ರಚಿಸಿದ್ದೇವೆ. ಸಂಜೆ ವೇಳೆ ಇಲಾಖೆ 112 ವಾಹನದ ಗಸ್ತನ್ನು ಹೆಚ್ಚಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>