<p><strong>ಮಂಗಳೂರು</strong>: ಮುಖ್ಯ ಕಾಲುವೆ ಒತ್ತುವರಿ, ಪ್ರಮುಖ ಕಾಲುವೆಯ ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರನ್ನು ಒತ್ತಾಯಿಸಿದರು.</p>.<p>ಕಾಂಗ್ರೆಸ್ನ ಮಾಜಿ ಕಾರ್ಪೊರೇಟರ್ಗಳು ಐವನ್ ಡಿಸೋಜ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿ ಭೇಟಿ ಮಾಡಿ, ಈ ಕುರಿತು ಚರ್ಚಿಸಿದರು.</p>.<p>ಪಾಲಿಕೆಯಲ್ಲಿ ಸಮಗ್ರವಾಗಿ ಬದಲಾವಣೆ ತರುವಂತಹ ಆಡಳಿತ ವ್ಯವಸ್ಥೆ ತರಬೇಕು ಮತ್ತು ಮಹಾನಗರ ಪಾಲಿಕೆಯಲ್ಲಿ ನಡೆಯುವ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಬೇಕು. ಕಾನೂನು ಬಾಹಿರವಾಗಿ ನಡೆಯುವ ಅನೇಕ ವಿಷಯಗಳ ಬಗ್ಗೆ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಮಳೆಹಾನಿಯಿಂದ ಆಗಿರುವ ನಷ್ಟಕ್ಕೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಐವನ್ ಒತ್ತಾಯಿಸಿದರು. ಪಂಪ್ವೆಲ್ ಮತ್ತು ಇತರ ಕಡೆಗಳಲ್ಲಿ ಮಳೆ ಬಂದಾಗ ಉಂಟಾಗುವ ನೆರೆ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ವರದಿ ಸಿದ್ಧಪಡಿಸಬೇಕು ಎಂದು ಒತ್ತಾಯಿಸಲಾಯಿತು.</p>.<p>ಮಾಜಿ ಕಾರ್ಪೊರೇಟರ್ಗಳಾದ ಶಶಿಧರ್ ಹೆಗ್ದೆ, ಪ್ರವೀಣ್ಚಂದ್ರ ಆಳ್ವ, ಪ್ರಕಾಶ್ ಸಾಲಿಯಾನ್, ಶಂಶುದ್ದೀನ್ ಕುದ್ರೋಳಿ, ಲ್ಯಾನ್ಸ್ ಲೋಟ್ ಪಿಂಟೊ, ಅಶ್ರಫ್ ಬಜಾಲ್, ಸತೀಶ್ ಪೆಂಗಲ್, ಕಿಶೋರ್ ಶೆಟ್ಟಿ, ಹೇಮಂತ್ ಗರೋಡಿ, ಪ್ರೇಮ್ ಬಲ್ಲಾಳ್ಬಾಗ್ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮುಖ್ಯ ಕಾಲುವೆ ಒತ್ತುವರಿ, ಪ್ರಮುಖ ಕಾಲುವೆಯ ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರನ್ನು ಒತ್ತಾಯಿಸಿದರು.</p>.<p>ಕಾಂಗ್ರೆಸ್ನ ಮಾಜಿ ಕಾರ್ಪೊರೇಟರ್ಗಳು ಐವನ್ ಡಿಸೋಜ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿ ಭೇಟಿ ಮಾಡಿ, ಈ ಕುರಿತು ಚರ್ಚಿಸಿದರು.</p>.<p>ಪಾಲಿಕೆಯಲ್ಲಿ ಸಮಗ್ರವಾಗಿ ಬದಲಾವಣೆ ತರುವಂತಹ ಆಡಳಿತ ವ್ಯವಸ್ಥೆ ತರಬೇಕು ಮತ್ತು ಮಹಾನಗರ ಪಾಲಿಕೆಯಲ್ಲಿ ನಡೆಯುವ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಬೇಕು. ಕಾನೂನು ಬಾಹಿರವಾಗಿ ನಡೆಯುವ ಅನೇಕ ವಿಷಯಗಳ ಬಗ್ಗೆ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಮಳೆಹಾನಿಯಿಂದ ಆಗಿರುವ ನಷ್ಟಕ್ಕೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಐವನ್ ಒತ್ತಾಯಿಸಿದರು. ಪಂಪ್ವೆಲ್ ಮತ್ತು ಇತರ ಕಡೆಗಳಲ್ಲಿ ಮಳೆ ಬಂದಾಗ ಉಂಟಾಗುವ ನೆರೆ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ವರದಿ ಸಿದ್ಧಪಡಿಸಬೇಕು ಎಂದು ಒತ್ತಾಯಿಸಲಾಯಿತು.</p>.<p>ಮಾಜಿ ಕಾರ್ಪೊರೇಟರ್ಗಳಾದ ಶಶಿಧರ್ ಹೆಗ್ದೆ, ಪ್ರವೀಣ್ಚಂದ್ರ ಆಳ್ವ, ಪ್ರಕಾಶ್ ಸಾಲಿಯಾನ್, ಶಂಶುದ್ದೀನ್ ಕುದ್ರೋಳಿ, ಲ್ಯಾನ್ಸ್ ಲೋಟ್ ಪಿಂಟೊ, ಅಶ್ರಫ್ ಬಜಾಲ್, ಸತೀಶ್ ಪೆಂಗಲ್, ಕಿಶೋರ್ ಶೆಟ್ಟಿ, ಹೇಮಂತ್ ಗರೋಡಿ, ಪ್ರೇಮ್ ಬಲ್ಲಾಳ್ಬಾಗ್ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>