<p><strong>ಮಂಗಳೂರು</strong>: ಎಂಸಿಎಫ್ ಹೆಸರು ಉಳಿಸಿ ವೇದಿಕೆ ಸದಸ್ಯರು ಗುರುವಾರ ಪಣಂಬೂರಿನ ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ ಕಚೇರಿಗೆ ಭೇಟಿ ನೀಡಿ, ಸಂಸ್ಥೆಯ ಹೆಸರನ್ನು ಹಿಂದಿನಂದತೆ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ (ಎಂಸಿಎಫ್) ಎಂದು ಉಳಿಸಬೇಕು ಎಂದು ಮನವಿ ಸಲ್ಲಿಸಿದರು.</p>.<p>ವೇದಿಕೆಯ ಮ್ಯಾಕ್ಸಿಂ ಆಲ್ಫ್ರೆಡ್ ಡಿಸೋಜ ಮಾತನಾಡಿ, 50 ವರ್ಷಗಳಿಂದ ಅಸ್ತಿತ್ವದಲ್ಲಿರುವ, ಸಾವಿರಾರು ಸ್ಥಳೀಯ ಯುವ ಜನರಿಗೆ ಉದ್ಯೋಗ ನೀಡುತ್ತಿದ್ದ, ಸಮುದಾಯದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಎಂಸಿಎಫ್ ಹೆಸರನ್ನು ತೆಗೆದಿದ್ದು ಸರಿಯಲ್ಲ ಎಂದರು.</p>.<p>ಶಿವರಾಂ ಶೆಟ್ಟಿ ಮಾತನಾಡಿ, ಇಲ್ಲಿಯ ಹೂಡಿಕೆದಾರರಿಂದ ಸ್ಥಾಪಿತವಾದ ಸಂಸ್ಥೆಯ ಆಡಳಿತವು ಹೊರಗಿನ ಇನ್ನೊಂದು ಸಂಸ್ಥೆಯ ನಿಯಂತ್ರಣಕ್ಕೆ ಹೋದರೆ ಸ್ಥಳೀಯ ಯುವ ಜನರು ಉದ್ಯೋಗ ವಂಚಿತರಾಗಲಿದ್ದಾರೆ. ಹೆಸರು ಬದಲಾವಣೆಯು ಸಂಸ್ಥೆಯನ್ನು ಜನರಿಂದ ಇನ್ನಷ್ಟು ದೂರ ಮಾಡಬಹುದು ಎಂದರು.</p>.<p>ಆಡಳಿತ ಮಂಡಳಿ ಪರವಾಗಿ ಎಚ್ಆರ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಚೇತನ್ ಮೆಂಡೋನ್ಸಾ ಮನವಿ ಸ್ವೀಕರಿಸಿ, ಮೇಲಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.</p>.<p>ವೇದಿಕೆಯ ವೈ.ಎಂ. ದೇವದಾಸ್, ದಯಾನಂದ ಶೆಟ್ಟಿ, ಮೊಹಮ್ಮದ್ ಅಲಿ, ಸಾಯಿನಾಥ್ ಸಾವಂತ್ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಎಂಸಿಎಫ್ ಹೆಸರು ಉಳಿಸಿ ವೇದಿಕೆ ಸದಸ್ಯರು ಗುರುವಾರ ಪಣಂಬೂರಿನ ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ ಕಚೇರಿಗೆ ಭೇಟಿ ನೀಡಿ, ಸಂಸ್ಥೆಯ ಹೆಸರನ್ನು ಹಿಂದಿನಂದತೆ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ (ಎಂಸಿಎಫ್) ಎಂದು ಉಳಿಸಬೇಕು ಎಂದು ಮನವಿ ಸಲ್ಲಿಸಿದರು.</p>.<p>ವೇದಿಕೆಯ ಮ್ಯಾಕ್ಸಿಂ ಆಲ್ಫ್ರೆಡ್ ಡಿಸೋಜ ಮಾತನಾಡಿ, 50 ವರ್ಷಗಳಿಂದ ಅಸ್ತಿತ್ವದಲ್ಲಿರುವ, ಸಾವಿರಾರು ಸ್ಥಳೀಯ ಯುವ ಜನರಿಗೆ ಉದ್ಯೋಗ ನೀಡುತ್ತಿದ್ದ, ಸಮುದಾಯದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಎಂಸಿಎಫ್ ಹೆಸರನ್ನು ತೆಗೆದಿದ್ದು ಸರಿಯಲ್ಲ ಎಂದರು.</p>.<p>ಶಿವರಾಂ ಶೆಟ್ಟಿ ಮಾತನಾಡಿ, ಇಲ್ಲಿಯ ಹೂಡಿಕೆದಾರರಿಂದ ಸ್ಥಾಪಿತವಾದ ಸಂಸ್ಥೆಯ ಆಡಳಿತವು ಹೊರಗಿನ ಇನ್ನೊಂದು ಸಂಸ್ಥೆಯ ನಿಯಂತ್ರಣಕ್ಕೆ ಹೋದರೆ ಸ್ಥಳೀಯ ಯುವ ಜನರು ಉದ್ಯೋಗ ವಂಚಿತರಾಗಲಿದ್ದಾರೆ. ಹೆಸರು ಬದಲಾವಣೆಯು ಸಂಸ್ಥೆಯನ್ನು ಜನರಿಂದ ಇನ್ನಷ್ಟು ದೂರ ಮಾಡಬಹುದು ಎಂದರು.</p>.<p>ಆಡಳಿತ ಮಂಡಳಿ ಪರವಾಗಿ ಎಚ್ಆರ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಚೇತನ್ ಮೆಂಡೋನ್ಸಾ ಮನವಿ ಸ್ವೀಕರಿಸಿ, ಮೇಲಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.</p>.<p>ವೇದಿಕೆಯ ವೈ.ಎಂ. ದೇವದಾಸ್, ದಯಾನಂದ ಶೆಟ್ಟಿ, ಮೊಹಮ್ಮದ್ ಅಲಿ, ಸಾಯಿನಾಥ್ ಸಾವಂತ್ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>