<p><strong>ಮಂಗಳೂರು</strong>: ‘ವಿಮಾನ ನಿಲ್ದಾಣದಲ್ಲಿ ಅಲ್ಲಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಲಾಗಿದೆ. ಅವುಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುತ್ತೇವೆ’ ಎಂಬುದಾಗಿ ಬಜಪೆಯಲ್ಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇ–ಮೇಲ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಸಂದೇಶ ಕಳುಹಿಸಿದ್ದು, ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ಏಪ್ರಿಲ್ 29ರಂದು ಬೆಳಿಗ್ಗೆ 9.37ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಇ–ಮೇಲ್ಗೆ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶಾ ಕೆ.ಜಿ. ಅವರು ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507ರನ್ವಯ (ಬೆದರಿಕೆ ಸಂದೇಶ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಇಲ್ಲಿನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.</p>.<p>‘ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಮಂಗಳೂರು ವಿಮಾನ ನಿಲ್ದಾಣದ ಜೊತೆಗೆ ದೇಶದ ಸುಮಾರು 25ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡುಬಂದಿದೆ. ಆರೋಪಿಯನ್ನು ಪತ್ತೆ ಹಚ್ಚಲು ಕ್ರಮವಹಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>‘ಅಪರಿಚಿತ ವ್ಯಕ್ತಿಯು ವಿಮಾನ ನಿಲ್ದಾಣಗಳ ಇ–ಮೇಲ್ಗಳು ಹಾಗೂ ವಿಮಾನನಿಲ್ದಾಣಗಳ ಭದ್ರತಾ ಏಜೆನ್ಸಿಯಾಗಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಸಂಬಂಧಿಸಿದ ಇ–ಮೇಲ್ಗಳೂ ಸೇರಿ 90ಕ್ಕೂ ಹೆಚ್ಚು ಇ–ಮೇಲ್ ವಿಳಾಸಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾನೆ’ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.</p>.<p>‘ವಿಮಾನ ನಿಲ್ದಾಣದಲ್ಲಿ ಅಲ್ಲಲ್ಲಿ ಯಾರಿಗೂ ಕಾಣಿಸದಂತೆ ಬಾಂಬ್ಗಳನ್ನು ಇರಿಸಿದ್ದೇನೆ. ಕೆಲ ವಿಮಾನಗಳಲ್ಲಿ ಮೂರು ಕಡೆ ಸ್ಫೋಟಕಗಳನ್ನು ಇಟ್ಟಿದ್ದೇನೆ. ಕೆಲವೇ ಗಂಟೆಗಳಲ್ಲಿ ಅವುಗಳನ್ನು ಸ್ಫೋಟಿಸಲಿದ್ದೇನೆ. ಎಲ್ಲೆಡೆ ರಕ್ತಪಾತವಾಗುವಂತೆ ಖಂಡಿತ ಮಾಡುತ್ತೇನೆ. ಎಷ್ಟು ಸಾಧ್ಯವೋ ಅಷ್ಟು ಜನರ ಪ್ರಾಣ ತೆಗೆಯುತ್ತೇನೆ. ‘ಟೆರರೈಸರ್ಸ್111’ ಬಳಗವು ಈ ಮಾರಣಹೋಮದ ಹಿಂದೆ ಇದೆ’ ಎಂಬ ಒಕ್ಕಣೆ ಇ– ಮೇಲ್ನಲ್ಲಿತ್ತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ವಿಮಾನ ನಿಲ್ದಾಣದಲ್ಲಿ ಅಲ್ಲಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಲಾಗಿದೆ. ಅವುಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುತ್ತೇವೆ’ ಎಂಬುದಾಗಿ ಬಜಪೆಯಲ್ಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇ–ಮೇಲ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಸಂದೇಶ ಕಳುಹಿಸಿದ್ದು, ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ಏಪ್ರಿಲ್ 29ರಂದು ಬೆಳಿಗ್ಗೆ 9.37ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಇ–ಮೇಲ್ಗೆ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶಾ ಕೆ.ಜಿ. ಅವರು ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507ರನ್ವಯ (ಬೆದರಿಕೆ ಸಂದೇಶ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಇಲ್ಲಿನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.</p>.<p>‘ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಮಂಗಳೂರು ವಿಮಾನ ನಿಲ್ದಾಣದ ಜೊತೆಗೆ ದೇಶದ ಸುಮಾರು 25ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡುಬಂದಿದೆ. ಆರೋಪಿಯನ್ನು ಪತ್ತೆ ಹಚ್ಚಲು ಕ್ರಮವಹಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>‘ಅಪರಿಚಿತ ವ್ಯಕ್ತಿಯು ವಿಮಾನ ನಿಲ್ದಾಣಗಳ ಇ–ಮೇಲ್ಗಳು ಹಾಗೂ ವಿಮಾನನಿಲ್ದಾಣಗಳ ಭದ್ರತಾ ಏಜೆನ್ಸಿಯಾಗಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಸಂಬಂಧಿಸಿದ ಇ–ಮೇಲ್ಗಳೂ ಸೇರಿ 90ಕ್ಕೂ ಹೆಚ್ಚು ಇ–ಮೇಲ್ ವಿಳಾಸಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾನೆ’ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.</p>.<p>‘ವಿಮಾನ ನಿಲ್ದಾಣದಲ್ಲಿ ಅಲ್ಲಲ್ಲಿ ಯಾರಿಗೂ ಕಾಣಿಸದಂತೆ ಬಾಂಬ್ಗಳನ್ನು ಇರಿಸಿದ್ದೇನೆ. ಕೆಲ ವಿಮಾನಗಳಲ್ಲಿ ಮೂರು ಕಡೆ ಸ್ಫೋಟಕಗಳನ್ನು ಇಟ್ಟಿದ್ದೇನೆ. ಕೆಲವೇ ಗಂಟೆಗಳಲ್ಲಿ ಅವುಗಳನ್ನು ಸ್ಫೋಟಿಸಲಿದ್ದೇನೆ. ಎಲ್ಲೆಡೆ ರಕ್ತಪಾತವಾಗುವಂತೆ ಖಂಡಿತ ಮಾಡುತ್ತೇನೆ. ಎಷ್ಟು ಸಾಧ್ಯವೋ ಅಷ್ಟು ಜನರ ಪ್ರಾಣ ತೆಗೆಯುತ್ತೇನೆ. ‘ಟೆರರೈಸರ್ಸ್111’ ಬಳಗವು ಈ ಮಾರಣಹೋಮದ ಹಿಂದೆ ಇದೆ’ ಎಂಬ ಒಕ್ಕಣೆ ಇ– ಮೇಲ್ನಲ್ಲಿತ್ತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>