‘ಇಲಾಖೆಯಲ್ಲಿರುವ ಅಧಿಕಾರಿ ಹಾಗೂ ಸಿಬ್ಬಂದಿಯಲ್ಲಿ ಬಹಳಷ್ಟು ಯುವಕರು, ಅವಿವಾಹಿತರಿದ್ದು, ಕೆಲವರು ತಮ್ಮ ಪೋಷಕರ ಜತೆ ಇಲ್ಲೇ ವಾಸವಾಗಿದ್ದರು. ಆದರೆ ಕೋವಿಡ್ ಕಾರಣದಿಂದ ಹಲವರು ತಮ್ಮ ಕುಟುಂಬಸ್ಥರನ್ನು ಈಗಾಗಲೇ ಊರುಗಳಿಗೆ ಕಳುಹಿಸಿದ್ದಾರೆ. ಸದ್ಯ ಹೋಟೆಲ್, ರೆಸ್ಟೊರೆಂಟ್ಗಳಲ್ಲಿ ಊಟ ಮಾಡುವ ವ್ಯವಸ್ಥೆ ಇಲ್ಲ. ಹಾಗಾಗಿ ಸಿಬ್ಬಂದಿಗೆ ಬಹಳಷ್ಟು ತೊಂದರೆ ಆಗುವುದು ಗಮನಕ್ಕೆ ಬಂದ ಕಾರಣ ಈ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಕಮಿಷನರೇಟ್ ಕಚೇರಿ ಆವರಣದಲ್ಲಿ ಕ್ಯಾಂಟೀನ್ ತೆರೆಯಲಾಗಿದೆ’ ಎಂದು ತಿಳಿಸಿದರು.