<p><strong>ಬೆಳ್ತಂಗಡಿ</strong>: ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ತಾಲ್ಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಉಚಿತವಾಗಿ ಹಾಲು, ಹಣ್ಣು–ಹಂಪಲು ವಿತರಿಸಲಾಯಿತು.</p><p>ಕಾರ್ಯಕ್ರಮದ ಬಗ್ಗೆ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ., ‘ದೇಶದಲ್ಲಿ 28 ಕೋಟಿ ಜನ ಹಾಲು ಖರೀದಿಸಲು ಸಾಧ್ಯವಿಲ್ಲದೆ ಜೀವಿಸುತ್ತಿದ್ದಾರೆ. ಅಪೌಷ್ಟಿಕತೆಯ ಕೊರತೆಯಿಂದ ಮಕ್ಕಳು, ಮಹಿಳೆಯರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಾಗರ ಪಂಚಮಿ ಹೆಸರಲ್ಲಿ ಕಲ್ಲು, ಹುತ್ತಗಳಿಗೆ ಹಾಲು ಚೆಲ್ಲುವ ಮೂಲಕ ದುರುಪಯೋಗ ಮಾಡುತ್ತೇವೆ. ಅದರ ಬದಲಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ, ರೋಗಿಗಳಿಗೆ ನೀಡಿದರೆ ಉತ್ತಮ’ ಎಂದರು.</p><p>‘ಜನಜಾಗೃತಿ ಮೂಡಿಸಲು ರೋಗಿಗಳಿಗೆ ಹಾಲು, ಹಣ್ಣು ವಿತರಿಸುತ್ತಿದ್ದೇವೆ. ಹಾವುಗಳು ಹಾಲು ಕುಡಿಯುವುದಿಲ್ಲ. ಹಾವಿನ ಹೆಸರಿನಲ್ಲಿ ಹಾಲನ್ನು ಪೋಲು ಮಾಡುವುದನ್ನು ನಿಲ್ಲಿಸಿ. ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ ನೀಡಿದರೆ ಒಂದು ಜೀವ ಉಳಿಸಿದಂತಾಗುತ್ತದೆ’ ಎಂದರು.</p>.<p>ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಕೆ., ಹಿರಿಯ ಸುಶ್ರೂಷಕಿ ಪೊನ್ನಮ್ಮ, ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಯಶವಂತ ಪಟವರ್ಧನ್, ಜಾನ್ ಅರ್ವಿನ್ ಡಿಸೋಜ, ನಿರ್ದೇಶಕಿ ಸುಕನ್ಯಾ ಎಚ್., ಸದಸ್ಯ ಶೇಖರ್ ಲಾಯಿಲ, ಎಕೆಜಿ ಸೊಸೈಟಿ ಸಿಬ್ಬಂದಿ ಸಂಜೀವ ಆರ್., ಕೀರ್ತನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ</strong>: ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ತಾಲ್ಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಉಚಿತವಾಗಿ ಹಾಲು, ಹಣ್ಣು–ಹಂಪಲು ವಿತರಿಸಲಾಯಿತು.</p><p>ಕಾರ್ಯಕ್ರಮದ ಬಗ್ಗೆ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ., ‘ದೇಶದಲ್ಲಿ 28 ಕೋಟಿ ಜನ ಹಾಲು ಖರೀದಿಸಲು ಸಾಧ್ಯವಿಲ್ಲದೆ ಜೀವಿಸುತ್ತಿದ್ದಾರೆ. ಅಪೌಷ್ಟಿಕತೆಯ ಕೊರತೆಯಿಂದ ಮಕ್ಕಳು, ಮಹಿಳೆಯರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಾಗರ ಪಂಚಮಿ ಹೆಸರಲ್ಲಿ ಕಲ್ಲು, ಹುತ್ತಗಳಿಗೆ ಹಾಲು ಚೆಲ್ಲುವ ಮೂಲಕ ದುರುಪಯೋಗ ಮಾಡುತ್ತೇವೆ. ಅದರ ಬದಲಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ, ರೋಗಿಗಳಿಗೆ ನೀಡಿದರೆ ಉತ್ತಮ’ ಎಂದರು.</p><p>‘ಜನಜಾಗೃತಿ ಮೂಡಿಸಲು ರೋಗಿಗಳಿಗೆ ಹಾಲು, ಹಣ್ಣು ವಿತರಿಸುತ್ತಿದ್ದೇವೆ. ಹಾವುಗಳು ಹಾಲು ಕುಡಿಯುವುದಿಲ್ಲ. ಹಾವಿನ ಹೆಸರಿನಲ್ಲಿ ಹಾಲನ್ನು ಪೋಲು ಮಾಡುವುದನ್ನು ನಿಲ್ಲಿಸಿ. ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ ನೀಡಿದರೆ ಒಂದು ಜೀವ ಉಳಿಸಿದಂತಾಗುತ್ತದೆ’ ಎಂದರು.</p>.<p>ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಕೆ., ಹಿರಿಯ ಸುಶ್ರೂಷಕಿ ಪೊನ್ನಮ್ಮ, ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಯಶವಂತ ಪಟವರ್ಧನ್, ಜಾನ್ ಅರ್ವಿನ್ ಡಿಸೋಜ, ನಿರ್ದೇಶಕಿ ಸುಕನ್ಯಾ ಎಚ್., ಸದಸ್ಯ ಶೇಖರ್ ಲಾಯಿಲ, ಎಕೆಜಿ ಸೊಸೈಟಿ ಸಿಬ್ಬಂದಿ ಸಂಜೀವ ಆರ್., ಕೀರ್ತನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>