ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಣಾಜೆ ಸಮೀಪದ ಮುಡಿಪು, ಬಾಳೆಪುಣಿ, ಇನೋಳಿ ಪ್ರದೇಶದಲ್ಲಿ ವ್ಯಾಪಕವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು ₹50 ಕೋಟಿ ನಷ್ಟ ಉಂಟಾಗಿದೆ. ಈ ದಂಧೆಯಲ್ಲಿ ಸ್ಥಳೀಯರಲ್ಲದೇ ತಮಿಳುನಾಡು, ಆಂಧ್ರಪ್ರದೇಶ, ಕೇರಳದವರೂ ಶಾಮೀಲಾಗಿದ್ದಾರೆ’ ಎಂದು ದೂರಿದರು.