ಮಂಗಳೂರು: ಭೂಕಂಪನದಿಂದ ಹಾನಿಗೊಳಗಾದ ಸುಳ್ಯ ತಾಲ್ಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವ ಆರ್. ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್, ಬಂದರು ಹಾಗೂ ಮೀನುಗಾರಿಕೆ ಸಚಿವ ಎಸ್.ಅಂಗಾರ ಅವರು ಗುರುವಾರ ಭೇಟಿ ನೀಡಿದರು.
ಮನೆ ಹಾನಿ ಪರಿಹಾರವಾಗಿ ₹45 ಸಾವಿರ ಮೊತ್ತದ ಚೆಕ್ ವಿತರಿಸಿದ ಸಚಿವ ಅಶೋಕ್, ₹5 ಲಕ್ಷ ಪರಿಹಾರ ಮಂಜೂರು ಮಾಡುವ ಭರವಸೆ ನೀಡಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್, ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಇದ್ದರು.