ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಹಾಸ್ಟೆಲ್‌ಗೆ ಸಚಿವ ಜಮೀರ್‌ ಭೇಟಿ: ಅವ್ಯವಸ್ಥೆ ಕಂಡು ಕೆಂಡಾಮಂಡಲ

Published 6 ಸೆಪ್ಟೆಂಬರ್ 2023, 4:41 IST
Last Updated 6 ಸೆಪ್ಟೆಂಬರ್ 2023, 4:41 IST
ಅಕ್ಷರ ಗಾತ್ರ

ಮಂಗಳೂರು: ವೆಲೆನ್ಸಿಯಾ ರಸ್ತೆ ಬಳಿಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲವಾದ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಅಮಾನತು ಮಾಡುವಂತೆ ಸೂಚಿಸಿದರು.

ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಸಿಟ್ಟಾದರು. ಹಾಸ್ಟೆಲ್ ವಿದ್ಯಾರ್ಥಿಗಳು, 'ಗುಣಮಟ್ಟದ ಆಹಾರ ಕೊಡುತ್ತಿಲ್ಲ, ಕೋಳಿ ಪದಾರ್ಥವನ್ನು ವಾರಕ್ಕೊಮ್ಮೆ ನೀಡುವ ಬದಲು ಹದಿನೈದು ದಿನಕ್ಕೊಮ್ಮೆ ನೀಡಲಾಗುತ್ತಿದೆ. ಆಹಾರ ಪಟ್ಟಿಯ ಪ್ರಕಾರ ಪೊರೈಕೆ ಮಾಡುತ್ತಿಲ್ಲ' ಎಂದು ದೂರಿದರು.

'ಐದು ವರ್ಷಗಳಾದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ' ಎಂದು ವಿದ್ಯಾರ್ಥಿಗಳು ಸಚಿವರಲ್ಲಿ ಅಹವಾಲು ಹೇಳಿಕೊಂಡರು.

ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಅವರಿಗೆ ಶೋಕಾಸ್ ನೋಟಿಸ್ ನೀಡಲು ಸಚಿವರು ಸೂಚಿಸಿದರು. ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಜೊತೆಯಲ್ಲಿದ್ದರು.

ವಿದ್ಯಾರ್ಥಿನಿಲಯದ ಶೌಚಾಲಯದ ಸ್ಥಿತಿ

ವಿದ್ಯಾರ್ಥಿನಿಲಯದ ಶೌಚಾಲಯದ ಸ್ಥಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT