<p><strong>ಮಂಗಳೂರು:</strong> ಬುಲ್ಟ್ರಾಲ್ ಮತ್ತು ಲೈಟ್ ಫಿಶಿಂಗ್ನಲ್ಲಿ ನಿರತರಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬುಲ್ಟ್ರಾಲ್ ಮತ್ತು ಲೈಟ್ ಫಿಶಿಂಗ್ ಅನ್ನು ನಿಷೇಧಿಸಲಾಗಿದೆ. ಇದು ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.</p>.<p>ಕೆಲ ಮೀನುಗಾರರು ಈಗಲೂ ಬುಲ್ಟ್ರಾಲ್ ಮತ್ತು ಲೈಟ್ ಫಿಶಿಂಗ್ನಲ್ಲಿ ನಿರತರಾಗಿದ್ದಾರೆ. ಇದರಿಂದ ಸಾಂಪ್ರದಾಯಿಕ ಮೀನುಗಾರರಿಗೆ ಹೊಡೆತ ಬೀಳಲಿದೆ. ಸಾಂಪ್ರದಾಯಿಕ ಮೀನುಗಾರರ ಸಂಘದಿಂದ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅದಕ್ಕೆ ಅನುಗುಣವಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p><strong>ಆತಂಕ ಬೇಡ:</strong> ಪ್ರವಾಹದಲ್ಲಿ ಮನೆ, ಬೆಳೆ ಕಳೆದುಕೊಂಡಿರುವ ಸಂತ್ರಸ್ತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ. ರಾಜ್ಯ ಸರ್ಕಾರ ಅಗತ್ಯ ಪರಿಹಾರ ಒದಗಿಸಲು ಬದ್ಧವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಮನೆ ಕಳೆದುಕೊಂಡವರಿಗೆ ತಲಾ ₹5 ಲಕ್ಷ ಒದಗಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಅದರಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಎಲ್ಲ ಸಂತ್ರಸ್ತರಿಗೂ ಪರಿಹಾರ ದೊರೆಯಲಿದೆ ಎಂದರು.ಪ್ರವಾಹದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕೃಷಿ ಜಮೀನಿನಲ್ಲಿ ಮಣ್ಣು ಆವರಿಸಿದೆ. ಈ ಮಣ್ಣನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಬುಲ್ಟ್ರಾಲ್ ಮತ್ತು ಲೈಟ್ ಫಿಶಿಂಗ್ನಲ್ಲಿ ನಿರತರಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬುಲ್ಟ್ರಾಲ್ ಮತ್ತು ಲೈಟ್ ಫಿಶಿಂಗ್ ಅನ್ನು ನಿಷೇಧಿಸಲಾಗಿದೆ. ಇದು ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.</p>.<p>ಕೆಲ ಮೀನುಗಾರರು ಈಗಲೂ ಬುಲ್ಟ್ರಾಲ್ ಮತ್ತು ಲೈಟ್ ಫಿಶಿಂಗ್ನಲ್ಲಿ ನಿರತರಾಗಿದ್ದಾರೆ. ಇದರಿಂದ ಸಾಂಪ್ರದಾಯಿಕ ಮೀನುಗಾರರಿಗೆ ಹೊಡೆತ ಬೀಳಲಿದೆ. ಸಾಂಪ್ರದಾಯಿಕ ಮೀನುಗಾರರ ಸಂಘದಿಂದ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅದಕ್ಕೆ ಅನುಗುಣವಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p><strong>ಆತಂಕ ಬೇಡ:</strong> ಪ್ರವಾಹದಲ್ಲಿ ಮನೆ, ಬೆಳೆ ಕಳೆದುಕೊಂಡಿರುವ ಸಂತ್ರಸ್ತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ. ರಾಜ್ಯ ಸರ್ಕಾರ ಅಗತ್ಯ ಪರಿಹಾರ ಒದಗಿಸಲು ಬದ್ಧವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಮನೆ ಕಳೆದುಕೊಂಡವರಿಗೆ ತಲಾ ₹5 ಲಕ್ಷ ಒದಗಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಅದರಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಎಲ್ಲ ಸಂತ್ರಸ್ತರಿಗೂ ಪರಿಹಾರ ದೊರೆಯಲಿದೆ ಎಂದರು.ಪ್ರವಾಹದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕೃಷಿ ಜಮೀನಿನಲ್ಲಿ ಮಣ್ಣು ಆವರಿಸಿದೆ. ಈ ಮಣ್ಣನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>