<p><strong>ಮಂಗಳೂರು:</strong> ‘ನಾನು ಹಿಂದೂ. ಆದರೆ, ಹಿಂದೂ ಎಂದು ಹೇಳಿಕೊಂಡು ಹೋಗಲಾರೆ. ನಿಜವಾದ ಹಿಂದೂಗಳು ಮಾತ್ರ ಬೇರೆ ಧರ್ಮಗಳನ್ನು ಗೌರವಿಸುತ್ತಾರೆ. ಹಿಂದುತ್ವವನ್ನು ಮತ ಬ್ಯಾಂಕ್ಗಾಗಿ ಬಳಸುವುದು ಬಿಜೆಪಿಗರ ಕೆಲಸ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನಗೆ ಅವಕಾಶ ಸಿಕ್ಕಾಗ ಅಯೋಧ್ಯೆಗೆ ಹೋಗುತ್ತೇನೆ. ಅಲ್ಲಿ ಮಾತ್ರವಲ್ಲ ಮಸೀದಿ, ಚರ್ಚ್, ಬೋಧ್ಗಯಾಕ್ಕೆ ಕೂಡ ಹೋಗುತ್ತೇನೆ. ಆದರೆ, ಎಸ್. ಬಂಗಾರಪ್ಪ ಮಗನಾಗಿ ಮತ್ತು ಕಾಂಗ್ರೆಸ್ ಕಾರ್ಯಕರ್ತನಾಗಿ ದೇವರ ಹೆಸರಲ್ಲಿ ರಾಜಕೀಯ ಮಾಡುವುದಿಲ್ಲ’ ಎಂದರು.</p>.<p>ರಾಜ್ಯದಲ್ಲಿ ಬಿಜೆಪಿ ಸೋಲಿಗೆ ನಳಿನ್ಕುಮಾರ್ ಕಟೀಲ್ ಕಾರಣರಾಗಿದ್ದು, ಬಂಗಾರಪ್ಪ ಕೊಟ್ಟ ಭಿಕ್ಷೆಯಲ್ಲಿ ಅವರು ಅಧಿಕಾರ ಪಡೆದಿದ್ದಾರೆ. ಬಂಗಾರಪ್ಪ ಹೆಸರಿನಲ್ಲಿ ನಳಿನ್ಕುಮಾರ್ ಸಂಸದರಾದವರು. ಪ್ರವೀಣ್ ನೆಟ್ಟಾರು ಹತ್ಯೆ ವೇಳೆ ಸಂಸದರ ವಿರುದ್ಧ ಧಿಕ್ಕಾರ ಕೂಗಿದ್ದು, ಕಾಂಗ್ರೆಸ್ನವರಲ್ಲ; ಬಿಜೆಪಿ, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕಾರು ಅಲುಗಾಡಿಸಿದ್ದರು ಎಂಬುದು ನೆನಪಿರಲಿ ಎಂದರು.</p>.<p>‘ನಳಿನ್ಕುಮಾರ್ಗೆ ಮತ್ತೆ ಟಿಕೆಟ್ ನೀಡಬೇಕು, ಅವರನ್ನು ಸೋಲಿಸಲು ನಾನು ಬರುತ್ತೇನೆ. ಹಿಂದುತ್ವ ಮತ್ತು ಭಾವನಾತ್ಮಕ ನೆಲೆಯಲ್ಲಿ ಅವರು ಹಿಂದಿನ ಅವಧಿಯಲ್ಲಿ ಗೆದ್ದಿದ್ದಾರೆ. ಅವರು ಮಾಡಿದ ಅಭಿವೃದ್ಧಿ ತೋರಿಸಲಿ. ಮೋದಿ ಹೆಸರು ಹೇಳುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಉಸ್ತುವಾರಿಗಳೇ ಹೊಣೆ ಎಂಬ ಹೈಕಮಾಂಡ್ ಎಚ್ಚರಿಕೆಗೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ‘ಹೈಕಮಾಂಡ್ ಹೇಳಿದ್ದರಲ್ಲಿ ತಪ್ಪಿಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ನಾನು ಹಿಂದೂ. ಆದರೆ, ಹಿಂದೂ ಎಂದು ಹೇಳಿಕೊಂಡು ಹೋಗಲಾರೆ. ನಿಜವಾದ ಹಿಂದೂಗಳು ಮಾತ್ರ ಬೇರೆ ಧರ್ಮಗಳನ್ನು ಗೌರವಿಸುತ್ತಾರೆ. ಹಿಂದುತ್ವವನ್ನು ಮತ ಬ್ಯಾಂಕ್ಗಾಗಿ ಬಳಸುವುದು ಬಿಜೆಪಿಗರ ಕೆಲಸ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನಗೆ ಅವಕಾಶ ಸಿಕ್ಕಾಗ ಅಯೋಧ್ಯೆಗೆ ಹೋಗುತ್ತೇನೆ. ಅಲ್ಲಿ ಮಾತ್ರವಲ್ಲ ಮಸೀದಿ, ಚರ್ಚ್, ಬೋಧ್ಗಯಾಕ್ಕೆ ಕೂಡ ಹೋಗುತ್ತೇನೆ. ಆದರೆ, ಎಸ್. ಬಂಗಾರಪ್ಪ ಮಗನಾಗಿ ಮತ್ತು ಕಾಂಗ್ರೆಸ್ ಕಾರ್ಯಕರ್ತನಾಗಿ ದೇವರ ಹೆಸರಲ್ಲಿ ರಾಜಕೀಯ ಮಾಡುವುದಿಲ್ಲ’ ಎಂದರು.</p>.<p>ರಾಜ್ಯದಲ್ಲಿ ಬಿಜೆಪಿ ಸೋಲಿಗೆ ನಳಿನ್ಕುಮಾರ್ ಕಟೀಲ್ ಕಾರಣರಾಗಿದ್ದು, ಬಂಗಾರಪ್ಪ ಕೊಟ್ಟ ಭಿಕ್ಷೆಯಲ್ಲಿ ಅವರು ಅಧಿಕಾರ ಪಡೆದಿದ್ದಾರೆ. ಬಂಗಾರಪ್ಪ ಹೆಸರಿನಲ್ಲಿ ನಳಿನ್ಕುಮಾರ್ ಸಂಸದರಾದವರು. ಪ್ರವೀಣ್ ನೆಟ್ಟಾರು ಹತ್ಯೆ ವೇಳೆ ಸಂಸದರ ವಿರುದ್ಧ ಧಿಕ್ಕಾರ ಕೂಗಿದ್ದು, ಕಾಂಗ್ರೆಸ್ನವರಲ್ಲ; ಬಿಜೆಪಿ, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕಾರು ಅಲುಗಾಡಿಸಿದ್ದರು ಎಂಬುದು ನೆನಪಿರಲಿ ಎಂದರು.</p>.<p>‘ನಳಿನ್ಕುಮಾರ್ಗೆ ಮತ್ತೆ ಟಿಕೆಟ್ ನೀಡಬೇಕು, ಅವರನ್ನು ಸೋಲಿಸಲು ನಾನು ಬರುತ್ತೇನೆ. ಹಿಂದುತ್ವ ಮತ್ತು ಭಾವನಾತ್ಮಕ ನೆಲೆಯಲ್ಲಿ ಅವರು ಹಿಂದಿನ ಅವಧಿಯಲ್ಲಿ ಗೆದ್ದಿದ್ದಾರೆ. ಅವರು ಮಾಡಿದ ಅಭಿವೃದ್ಧಿ ತೋರಿಸಲಿ. ಮೋದಿ ಹೆಸರು ಹೇಳುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಉಸ್ತುವಾರಿಗಳೇ ಹೊಣೆ ಎಂಬ ಹೈಕಮಾಂಡ್ ಎಚ್ಚರಿಕೆಗೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ‘ಹೈಕಮಾಂಡ್ ಹೇಳಿದ್ದರಲ್ಲಿ ತಪ್ಪಿಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>