ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ‘ವ್ಯಸನಮುಕ್ತರು ದೃಢ ಸಂಕಲ್ಪದಿಂದ ಪರಿಶುದ್ಧ, ಆರೋಗ್ಯಪೂರ್ಣ ಜೀವನ ನಡೆಸಬೇಕು. ಕುಟುಂಬದ ಸದಸ್ಯರು ವ್ಯಸನ ಮುಕ್ತರನ್ನು ಪ್ರೀತಿ-ವಿಶ್ವಾಸ ಮತ್ತು ಗೌರವದಿಂದ ನೋಡಿಕೊಳ್ಳಬೇಕು’ ಎಂದು ಅವರುಸಲಹೆ ನೀಡಿದರು. ‘ಶಾಲಾ-ಕಾಲೇಜುಗಳ ಬಳಿ ಮಾದಕದ್ರವ್ಯ ಮಾರಾಟ ಜಾಲ ಹೆಚ್ಚಾಗುತ್ತಿದೆ. ಇದನ್ನು ಸರ್ಕಾರ ತಡೆಗಟ್ಟಬೇಕು ಎಂದು ಹೇಳಿದರು. ಜನಜಾಗೃತಿ ವೇದಿಕೆಯ ನಿರ್ದೇಶಕ ವಿವೇಕ್ ವಿ. ಪಾಸ್ , ರಾಜ್ಯ ಸಮಿತಿ ಅಧ್ಯಕ್ಷ ವಿ. ರಾಮಸ್ವಾಮಿ,ಭಾಸ್ಕರ್ ಎನ್. ಮತ್ತು ನಾಗೇಶ್ ಇದ್ದರು.