<p>ಮಂಗಳೂರು: ‘ಬಜೆಟ್ನಲ್ಲಿ ಅನುದಾನ ಒದಗಿಸುವಾಗ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರನ್ನು ಕಡೆಗಣಿಸಿದೆ. 2022–23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ₹ 5020 ಕೋಟಿ ಅನುದಾನ ನೀಡಿದ್ದ ಕೇಂದ್ರ ಸರ್ಕಾರ, 2023–24ನೇ ಸಾಲಿನಲ್ಲಿ ಈ ಮೊತ್ತವನ್ನು ₹ 3097ಕ್ಕೆ ಕಡಿತಗೊಳಿಸಿದೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಆರೋಪಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು,‘2018–19ರಲ್ಲಿ ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ₹ 3500 ಕೋಟಿ ಅನುದಾನ ಮೀಸಲಿಟ್ಟಿತ್ತು. ಕೇಂದ್ರವು 2023–24ರಲ್ಲಿ ಈ ಉದ್ದೇಶಕ್ಕಾಗಿ ಮೀಸಲಿದ್ದ ಅನುದಾನ ಅದಕ್ಕಿಂತಲೂ ಕಡಿಮೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 19ರಷ್ಟು ಇರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಕನಿಷ್ಠ ಪಕ್ಷ ₹ 20 ಸಾವಿರ ಕೋಟಿ ಅನುದಾನವನ್ನಾದರೂ ಮೀಸಲಿಡಬೇಕಿತ್ತು’ ಎಂದರು.</p>.<p>‘ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವೂ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮಗಳ ಅನುದಾನವನ್ನು ₹ 1,517 ಕೋಟಿಗೆ ಇಳಿಸಿದೆ. 2019–20ನೇ ಸಾಲಿನಲ್ಲಿ ಪ್ರಕಟಿಸಲಾದ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು ಇನ್ನೂ ರಚಿಸಿಲ್ಲ. ಈ ಸಲದ ಬಜೆಟ್ನಲ್ಲಾದರೂ ಈ ನಿಗಮ ರಚಿಸಿ ಕನಿಷ್ಠ ₹ 500 ಕೋಟಿ ಅನುದಾನ ಮೀಸಲಿಡಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ. ಆ ಬಳಿಕ ಕೋಮು ಸೌಹಾರ್ದ ಕದಡುವ ಪ್ರಯತ್ನಗಳು ತನ್ನಿಂದ ತಾನೆ ಕಡಿಮೆ ಆಗಲಿವೆ. ಈಗಿನ ಸರ್ಕಾರದ ಆಯಕಟ್ಟಿನ ಜಾಗದಲ್ಲಿರುವವರೇ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಇಂತಹ ಕೋಮುದ್ವೇಷ ಬೆಳೆಸಲು ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದರು.</p>.<p>ಕರಾವಳಿಗೆ ಪ್ರತ್ಯೇಕವಾಗಿ ಸಿದ್ಧಪಡಿಸಿರುವ ಪ್ರಣಾಳಿಕೆಯ ಮುಖ್ಯಾಂಶಗಳನ್ನು ಅವರು ಬಿಡುಗಡೆ ಮಾಡಿದರು. ‘ಮಾ 15ರ ಒಳಗೆ ಜಿಲ್ಲೆಯ ಪ್ರತಿ ಮನೆಗೂ ಇದನ್ನು ತಲುಪಿಸಿ ಸ್ವೀಕೃತಿ ಪಡೆಯಲಿದ್ದಾರೆ. ಈ ಸಲುವಾಗಿ ಪ್ರತಿ ಬೂತ್ಗೆ 20 ಕಾರ್ಯಕರ್ತರನ್ನು ನೇಮಿಸಿದ್ದೇವೆ’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕ ನವೀನ್ ಡಿಸೋಜ, ಪಕ್ಷದ ಮುಖಂಡರಾದ ಶಾಹುಲ್ ಹಮೀದ್, ಶುಭೋದಯ ಆಳ್ವ, ರಮಾನಂದ ಪೂಜಾರಿ, ಸಬಿತಾ ಮಿಸ್ಕಿತ್, ವಿವೇಕರಾಜ್, ಸಿ.ಎ.ಮುಸ್ತಾಫಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ‘ಬಜೆಟ್ನಲ್ಲಿ ಅನುದಾನ ಒದಗಿಸುವಾಗ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರನ್ನು ಕಡೆಗಣಿಸಿದೆ. 2022–23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ₹ 5020 ಕೋಟಿ ಅನುದಾನ ನೀಡಿದ್ದ ಕೇಂದ್ರ ಸರ್ಕಾರ, 2023–24ನೇ ಸಾಲಿನಲ್ಲಿ ಈ ಮೊತ್ತವನ್ನು ₹ 3097ಕ್ಕೆ ಕಡಿತಗೊಳಿಸಿದೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಆರೋಪಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು,‘2018–19ರಲ್ಲಿ ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ₹ 3500 ಕೋಟಿ ಅನುದಾನ ಮೀಸಲಿಟ್ಟಿತ್ತು. ಕೇಂದ್ರವು 2023–24ರಲ್ಲಿ ಈ ಉದ್ದೇಶಕ್ಕಾಗಿ ಮೀಸಲಿದ್ದ ಅನುದಾನ ಅದಕ್ಕಿಂತಲೂ ಕಡಿಮೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 19ರಷ್ಟು ಇರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಕನಿಷ್ಠ ಪಕ್ಷ ₹ 20 ಸಾವಿರ ಕೋಟಿ ಅನುದಾನವನ್ನಾದರೂ ಮೀಸಲಿಡಬೇಕಿತ್ತು’ ಎಂದರು.</p>.<p>‘ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವೂ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮಗಳ ಅನುದಾನವನ್ನು ₹ 1,517 ಕೋಟಿಗೆ ಇಳಿಸಿದೆ. 2019–20ನೇ ಸಾಲಿನಲ್ಲಿ ಪ್ರಕಟಿಸಲಾದ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು ಇನ್ನೂ ರಚಿಸಿಲ್ಲ. ಈ ಸಲದ ಬಜೆಟ್ನಲ್ಲಾದರೂ ಈ ನಿಗಮ ರಚಿಸಿ ಕನಿಷ್ಠ ₹ 500 ಕೋಟಿ ಅನುದಾನ ಮೀಸಲಿಡಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ. ಆ ಬಳಿಕ ಕೋಮು ಸೌಹಾರ್ದ ಕದಡುವ ಪ್ರಯತ್ನಗಳು ತನ್ನಿಂದ ತಾನೆ ಕಡಿಮೆ ಆಗಲಿವೆ. ಈಗಿನ ಸರ್ಕಾರದ ಆಯಕಟ್ಟಿನ ಜಾಗದಲ್ಲಿರುವವರೇ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಇಂತಹ ಕೋಮುದ್ವೇಷ ಬೆಳೆಸಲು ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದರು.</p>.<p>ಕರಾವಳಿಗೆ ಪ್ರತ್ಯೇಕವಾಗಿ ಸಿದ್ಧಪಡಿಸಿರುವ ಪ್ರಣಾಳಿಕೆಯ ಮುಖ್ಯಾಂಶಗಳನ್ನು ಅವರು ಬಿಡುಗಡೆ ಮಾಡಿದರು. ‘ಮಾ 15ರ ಒಳಗೆ ಜಿಲ್ಲೆಯ ಪ್ರತಿ ಮನೆಗೂ ಇದನ್ನು ತಲುಪಿಸಿ ಸ್ವೀಕೃತಿ ಪಡೆಯಲಿದ್ದಾರೆ. ಈ ಸಲುವಾಗಿ ಪ್ರತಿ ಬೂತ್ಗೆ 20 ಕಾರ್ಯಕರ್ತರನ್ನು ನೇಮಿಸಿದ್ದೇವೆ’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕ ನವೀನ್ ಡಿಸೋಜ, ಪಕ್ಷದ ಮುಖಂಡರಾದ ಶಾಹುಲ್ ಹಮೀದ್, ಶುಭೋದಯ ಆಳ್ವ, ರಮಾನಂದ ಪೂಜಾರಿ, ಸಬಿತಾ ಮಿಸ್ಕಿತ್, ವಿವೇಕರಾಜ್, ಸಿ.ಎ.ಮುಸ್ತಾಫಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>