ಬೆಳ್ತಂಗಡಿ: ತಾಲ್ಲೂಕಿನ ನಾವೂರು ಸಮೀಪದ ಮುರ ಜುಮ್ಮಾ ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆ ನಡೆದಿದೆ.
ಬುಧವಾರ ತಡ ರಾತ್ರಿಯ ವೇಳೆ ದುಷ್ಕರ್ಮಿಗಳು ಮಸೀದಿಯ ಆವರಣದೊಳಗೆ ಬಿಯರ್ ಬಾಟ್ಲಿ ಎಸೆದಿದ್ದಾರೆ. ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಬಿಯರ್ ಬಾಟ್ಲಿಗಳು ಬಿದ್ದಿರುವುದಾಗಿ ತಿಳಿದು ಬಂದಿದೆ.