‘ಸಾಕ್ಷ್ಯಾಧಾರಗಳು ನಿಮ್ಮ ಕೈಯ್ಯಲ್ಲಿವೆ. ಹಂತಕರನ್ನು ಬಂಧಿಸಿ. ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಆದರೆ, ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸಿದರೆನಗರ ಪೊಲೀಸ್ ಕಮಿಷನರ್ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ. ಪೊಲೀಸರ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡುತ್ತೇನೆ’ ಎಂದೂ ಅವರು ಹೇಳಿದ್ದಾರೆ.