ಅಧಿವೇಶನದ ಸಂದರ್ಭದಲ್ಲಿ ಸಚಿವರನ್ನು ಭೇಟಿಯಾಗಿರುವ ಶಾಸಕ ಕಾಮತ್, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಪ್ರತಿಭಾನ್ವಿತ ಕಬಡ್ಡಿ ಪಟುಗಳು ಇದ್ದಾರೆ. ಇವರು ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿ ಕೀರ್ತಿ ತಂದಿದ್ದಾರೆ. ಆದರೆ, ನಮ್ಮ ಜಿಲ್ಲಾ ಕ್ರೀಡಾ ವಸತಿ ನಿಲಯದಲ್ಲಿ ಕಬಡ್ಡಿ ಕ್ರೀಡೆಗೆ ಸಂಬಂಧಿಸಿದಂತೆ ಮಕ್ಕಳ ಸೇರ್ಪಡೆಗೆ ಅವಕಾಶ ಬೇಕಾಗಿದೆ. ಅಲ್ಲದೇ, ಅಗತ್ಯ ತರಬೇತುದಾರರು, ಸೌಲಭ್ಯಗಳನ್ನೂ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.