<p><strong>ಮಂಗಳೂರು: </strong>ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆ ಮಾಡುವ ವಿಚಾರವೇ ಅಲ್ಲ. ಇದು ಸಂವಿಧಾನದ ಮೂಲ ಆಶಯವನ್ನೇ ಬದಲಾಯಿಸುವ ಹೊಂದಿದಂತಿದೆ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.</p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕುರಿತ ಚರ್ಚೆಗೆ ಕಾಂಗ್ರೆಸ್ ಪಕ್ಷ ಒಪ್ಪಿಗೆ ನೀಡಿಲ್ಲ. ದೇಶದಲ್ಲಿ ಚರ್ಚೆ ಮಾಡಬೇಕಾಗಿರುವ ಜನಸಾಮಾನ್ಯರ ಸಮಸ್ಯೆಗಳು ಹಲವಾರು ಇವೆ. ತೈಲ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಕುರಿತು ಚರ್ಚೆ ನಡೆಯಲಿ. ಅದನ್ನು ಬಿಟ್ಟು ಪ್ರಜಾಪ್ರಭುತ್ವ ವಿರೋಧಿಯಾಗಿರುವ ಒಂದು ದೇಶ ಒಂದು ಚುನಾವಣೆ ಈ ವಿಷಯವನ್ನು ಚರ್ಚಿಸಬೇಕಾಗಿಲ್ಲ. ಈ ಕಲ್ಪನೆ ಅನುಷ್ಠಾನಗೊಂಡರೆ, ಪ್ರಾದೇಶಿಕ ಪಕ್ಷಗಳು, ಪ್ರಾದೇಶಿಕ ಸಮಸ್ಯೆಗಳಿಗೆ ಅಸ್ತಿತ್ವ ಇಲ್ಲದಂತಾಗುತ್ತದೆ. ಇದರಿಂದ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗುತ್ತದೆ’ ಎಂದರು.</p>.<p>‘ಕೆಂಜಾರಿನ ಗೋಶಾಲೆ ಅತಿಕ್ರಮಣ ಜಾಗದಲ್ಲಿ ಇದ್ದಲ್ಲಿ, ಅದನ್ನು ತೆರವುಗೊಳಿಸುವ ಪೂರ್ವ ಅಲ್ಲಿರುವ ಗೋವುಗಳನ್ನು ಬೇರೆ ಗೋಶಾಲೆಗಳಿಗೆ ಸ್ಥಳಾಂತರಿಸಬೇಕಿತ್ತು. ಯಾವುದೇ ಪರ್ಯಾಯ ವ್ಯವಸ್ಥೆ ಜಾರಿಗೊಳಿಸದೇ, ಮೂಕ ಪ್ರಾಣಿಗಳನ್ನು ಬೀದಿಗೆ ಬಿಡಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ ಈ ಜಾಗವನ್ನು ಕೋಸ್ಟ್ ಗಾರ್ಡ್ಗೆ ಮಂಜೂರುಗೊಳಿಸಿತ್ತು. ಈ ಜಾಗದ ಅತಿಕ್ರಮಣ ಸಮಸ್ಯೆ ಬಗೆಹರಿಸುವ ಬದಲಾಗಿ, ಜಿಲ್ಲಾಡಳಿತ ಗೋಶಾಲೆಯನ್ನು ಕೆಡವಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆ ಮಾಡುವ ವಿಚಾರವೇ ಅಲ್ಲ. ಇದು ಸಂವಿಧಾನದ ಮೂಲ ಆಶಯವನ್ನೇ ಬದಲಾಯಿಸುವ ಹೊಂದಿದಂತಿದೆ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.</p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕುರಿತ ಚರ್ಚೆಗೆ ಕಾಂಗ್ರೆಸ್ ಪಕ್ಷ ಒಪ್ಪಿಗೆ ನೀಡಿಲ್ಲ. ದೇಶದಲ್ಲಿ ಚರ್ಚೆ ಮಾಡಬೇಕಾಗಿರುವ ಜನಸಾಮಾನ್ಯರ ಸಮಸ್ಯೆಗಳು ಹಲವಾರು ಇವೆ. ತೈಲ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಕುರಿತು ಚರ್ಚೆ ನಡೆಯಲಿ. ಅದನ್ನು ಬಿಟ್ಟು ಪ್ರಜಾಪ್ರಭುತ್ವ ವಿರೋಧಿಯಾಗಿರುವ ಒಂದು ದೇಶ ಒಂದು ಚುನಾವಣೆ ಈ ವಿಷಯವನ್ನು ಚರ್ಚಿಸಬೇಕಾಗಿಲ್ಲ. ಈ ಕಲ್ಪನೆ ಅನುಷ್ಠಾನಗೊಂಡರೆ, ಪ್ರಾದೇಶಿಕ ಪಕ್ಷಗಳು, ಪ್ರಾದೇಶಿಕ ಸಮಸ್ಯೆಗಳಿಗೆ ಅಸ್ತಿತ್ವ ಇಲ್ಲದಂತಾಗುತ್ತದೆ. ಇದರಿಂದ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗುತ್ತದೆ’ ಎಂದರು.</p>.<p>‘ಕೆಂಜಾರಿನ ಗೋಶಾಲೆ ಅತಿಕ್ರಮಣ ಜಾಗದಲ್ಲಿ ಇದ್ದಲ್ಲಿ, ಅದನ್ನು ತೆರವುಗೊಳಿಸುವ ಪೂರ್ವ ಅಲ್ಲಿರುವ ಗೋವುಗಳನ್ನು ಬೇರೆ ಗೋಶಾಲೆಗಳಿಗೆ ಸ್ಥಳಾಂತರಿಸಬೇಕಿತ್ತು. ಯಾವುದೇ ಪರ್ಯಾಯ ವ್ಯವಸ್ಥೆ ಜಾರಿಗೊಳಿಸದೇ, ಮೂಕ ಪ್ರಾಣಿಗಳನ್ನು ಬೀದಿಗೆ ಬಿಡಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ ಈ ಜಾಗವನ್ನು ಕೋಸ್ಟ್ ಗಾರ್ಡ್ಗೆ ಮಂಜೂರುಗೊಳಿಸಿತ್ತು. ಈ ಜಾಗದ ಅತಿಕ್ರಮಣ ಸಮಸ್ಯೆ ಬಗೆಹರಿಸುವ ಬದಲಾಗಿ, ಜಿಲ್ಲಾಡಳಿತ ಗೋಶಾಲೆಯನ್ನು ಕೆಡವಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>