ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕುರಿತ ಚರ್ಚೆಗೆ ಕಾಂಗ್ರೆಸ್ ಪಕ್ಷ ಒಪ್ಪಿಗೆ ನೀಡಿಲ್ಲ. ದೇಶದಲ್ಲಿ ಚರ್ಚೆ ಮಾಡಬೇಕಾಗಿರುವ ಜನಸಾಮಾನ್ಯರ ಸಮಸ್ಯೆಗಳು ಹಲವಾರು ಇವೆ. ತೈಲ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಕುರಿತು ಚರ್ಚೆ ನಡೆಯಲಿ. ಅದನ್ನು ಬಿಟ್ಟು ಪ್ರಜಾಪ್ರಭುತ್ವ ವಿರೋಧಿಯಾಗಿರುವ ಒಂದು ದೇಶ ಒಂದು ಚುನಾವಣೆ ಈ ವಿಷಯವನ್ನು ಚರ್ಚಿಸಬೇಕಾಗಿಲ್ಲ. ಈ ಕಲ್ಪನೆ ಅನುಷ್ಠಾನಗೊಂಡರೆ, ಪ್ರಾದೇಶಿಕ ಪಕ್ಷಗಳು, ಪ್ರಾದೇಶಿಕ ಸಮಸ್ಯೆಗಳಿಗೆ ಅಸ್ತಿತ್ವ ಇಲ್ಲದಂತಾಗುತ್ತದೆ. ಇದರಿಂದ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗುತ್ತದೆ’ ಎಂದರು.