ಸೋಮೇಶ್ವರ ಪ್ರದೇಶದಲ್ಲಿ ಕಳೆದ ವರ್ಷ ಕೂಡ ದೇವಸ್ಥಾನದ ಮೋಹನ್ ಮನೆಯ ಬಳಿ ವ್ಯಾಪಕ ಕಡಲ್ಕೊರೆತ ಸಂಭವಿಸಿತ್ತು. ಆ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ಕೊಟ್ಟ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಡಲ್ಕೊರೆತ ತಡೆಗೆ ಕ್ರಮ ಕೈಗೊಂಡು, ಘಟನೆ ಪುನಾರಾವರ್ತನೆ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದರು. ನಂತರದ ದಿನಗಳಲ್ಲಿ ಯಾವುದೇ ಕೆಲಸ ಆಗದ ಪರಿಣಾಮ, ಸೋಮೇಶ್ವರ ಉಚ್ಚಿಲ ಬೆಟ್ಟಂಪಾಡಿ ಪ್ರದೇಶದಲ್ಲಿ ಹೆಚ್ಚಿನ ಆಸ್ತಿಪಾಸ್ತಿ ನಷ್ಟವಾಗುವ ಭೀತಿ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದೆ ಇದ್ದಲ್ಲಿ, ಜುಲೈ, ಆಗಸ್ಟ್ ತಿಂಗಳುಗಳಲ್ಲಿ ಹೆಚ್ಚಿನ ಕಡಲ್ಕೊರೆತ ಆಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.