ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲರ್ಪೆಯ ಅಪಾಯಕಾರಿ ತಿರುವು ಭಾಗದಲ್ಲಿ ಹಲವು ಅಫಘಾತಗಳು ನಡೆದಿದ್ದು, ಮೂವರು ಮೃತಪಟ್ಟಿದ್ದಾರೆ. ಈ ಧರೆಯನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದರು. ಸ್ಪಂದಿಸಿದ ಶಾಸಕರು ಧರೆ ತೆರವುಮಾಡುವಂತೆ ಸೂಚನೆ ನೀಡಿದರು.