<p><strong>ಪುತ್ತೂರು:</strong> ‘ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಗುರುತಿಸಿರುವ ಜಾಗದ ಅಳತೆ ವಿಚಾರದಲ್ಲಿ 5 ತಿಂಗಳು ಕಳೆದರೂ ವರದಿ ನೀಡದ ಸರ್ವೆ ಇಲಾಖೆಯ ಅಧಿಕಾರಿಯನ್ನು ಶಾಸಕ ಸಂಜೀವ ಮಠಂದೂರು ಮಂಗಳವಾರ ಇಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು.</p>.<p>‘ಒಂದು ನಿವೇಶನದ ಸರ್ವೆ ನಂಬರ್ ಪಟ್ಟಾ ಸ್ಥಳದಲ್ಲಿದೆ. ಹಾಗಾಗಿ ಅಳತೆ ಮಾಡಲು ಆಗುವುದಿಲ್ಲ’ ಎಂದು ಸರ್ವೆ ಅಧಿಕಾರಿ ಸಮರ್ಥನೆ ಕೊಡಲು ಮುಂದಾದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕ, ’ಇದನ್ನು ತಿಳಿಸಲು 5 ತಿಂಗಳು ಬೇಕಾಯಿತೇ? ಕರೆ ಮಾಡಿ ಇದನ್ನು ಮೊದಲೇ ತಿಳಿಸಿದ್ದರೆ, ಬೇರೆ ಸ್ಥಳವಾದರೂ ನೋಡಬಹುದಿತ್ತಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಈಗ 5 ಡಯಾಲಿಸಿಸ್ ಯಂತ್ರಗಳಿದ್ದು 51 ಮಂದಿ ರೋಗಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. 41 ಮಂದಿ ಕಾಯುವವರ ಪಟ್ಟಿಯಲ್ಲಿದ್ದಾರೆ. ರೋಗಿಗಳಿಗೆ ಸಕಾಲದಲ್ಲಿ ಡಯಾಲಿಸಿಸ್ ಸೌಲಭ್ಯ ಸಿಗುವಂತಾಗಲು ಆಸ್ಪತ್ರೆಯಲ್ಲಿ ಇನ್ನೂ 4 ಡಯಾಲಿಸಿಸ್ ಯಂತ್ರಗಳನ್ನು ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಳವಕಾಶವಿದ್ದರೂ ತಜ್ಞ ವೈದ್ಯರು ಇಲ್ಲದ ಕಾರಣ ಡಯಾಲಿಸಿಸ್ ಯಂತ್ರಗಳ ಅಳವಡಿಕೆ ಸಾಧ್ಯವಾಗಿಲ್ಲ’ ಎಂದರು.</p>.<p>‘ಪುತ್ತೂರು ತಾಲ್ಲೂಕಿನಲ್ಲಿ 4 ದಿನಗಳಿಂದ ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ಸದ್ಯ 3 ಸಕ್ರಿಯ ಪ್ರಕರಣಗಳಿವೆ.ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಶೇ 100ರಷ್ಟು ಲಸಿಕೆ ನೀಡಲಾಗುತ್ತಿದೆ’ ಎಂದು ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಸಭೆಗೆ ಮಾಹಿತಿ ನೀಡಿದರು.</p>.<p>‘ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಎರಡು ತಿಂಗಳ ಒಳಗಾಗಿ ಪರಿಹಾರ ಕಂಡುಕೊಳ್ಳಬೇಕು’ ಎಂದು ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ಅವರಿಗೆ ಶಾಸಕರು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಹಶೀಲ್ದಾರ್ ಟಿ. ರಮೇಶ್ ಬಾಬು, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಂಧ್ಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ‘ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಗುರುತಿಸಿರುವ ಜಾಗದ ಅಳತೆ ವಿಚಾರದಲ್ಲಿ 5 ತಿಂಗಳು ಕಳೆದರೂ ವರದಿ ನೀಡದ ಸರ್ವೆ ಇಲಾಖೆಯ ಅಧಿಕಾರಿಯನ್ನು ಶಾಸಕ ಸಂಜೀವ ಮಠಂದೂರು ಮಂಗಳವಾರ ಇಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು.</p>.<p>‘ಒಂದು ನಿವೇಶನದ ಸರ್ವೆ ನಂಬರ್ ಪಟ್ಟಾ ಸ್ಥಳದಲ್ಲಿದೆ. ಹಾಗಾಗಿ ಅಳತೆ ಮಾಡಲು ಆಗುವುದಿಲ್ಲ’ ಎಂದು ಸರ್ವೆ ಅಧಿಕಾರಿ ಸಮರ್ಥನೆ ಕೊಡಲು ಮುಂದಾದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕ, ’ಇದನ್ನು ತಿಳಿಸಲು 5 ತಿಂಗಳು ಬೇಕಾಯಿತೇ? ಕರೆ ಮಾಡಿ ಇದನ್ನು ಮೊದಲೇ ತಿಳಿಸಿದ್ದರೆ, ಬೇರೆ ಸ್ಥಳವಾದರೂ ನೋಡಬಹುದಿತ್ತಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಈಗ 5 ಡಯಾಲಿಸಿಸ್ ಯಂತ್ರಗಳಿದ್ದು 51 ಮಂದಿ ರೋಗಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. 41 ಮಂದಿ ಕಾಯುವವರ ಪಟ್ಟಿಯಲ್ಲಿದ್ದಾರೆ. ರೋಗಿಗಳಿಗೆ ಸಕಾಲದಲ್ಲಿ ಡಯಾಲಿಸಿಸ್ ಸೌಲಭ್ಯ ಸಿಗುವಂತಾಗಲು ಆಸ್ಪತ್ರೆಯಲ್ಲಿ ಇನ್ನೂ 4 ಡಯಾಲಿಸಿಸ್ ಯಂತ್ರಗಳನ್ನು ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಳವಕಾಶವಿದ್ದರೂ ತಜ್ಞ ವೈದ್ಯರು ಇಲ್ಲದ ಕಾರಣ ಡಯಾಲಿಸಿಸ್ ಯಂತ್ರಗಳ ಅಳವಡಿಕೆ ಸಾಧ್ಯವಾಗಿಲ್ಲ’ ಎಂದರು.</p>.<p>‘ಪುತ್ತೂರು ತಾಲ್ಲೂಕಿನಲ್ಲಿ 4 ದಿನಗಳಿಂದ ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ಸದ್ಯ 3 ಸಕ್ರಿಯ ಪ್ರಕರಣಗಳಿವೆ.ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಶೇ 100ರಷ್ಟು ಲಸಿಕೆ ನೀಡಲಾಗುತ್ತಿದೆ’ ಎಂದು ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಸಭೆಗೆ ಮಾಹಿತಿ ನೀಡಿದರು.</p>.<p>‘ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಎರಡು ತಿಂಗಳ ಒಳಗಾಗಿ ಪರಿಹಾರ ಕಂಡುಕೊಳ್ಳಬೇಕು’ ಎಂದು ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ಅವರಿಗೆ ಶಾಸಕರು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಹಶೀಲ್ದಾರ್ ಟಿ. ರಮೇಶ್ ಬಾಬು, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಂಧ್ಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>