<p><strong>ಉಳ್ಳಾಲ:</strong> ‘ತುರ್ತು ಕಾರ್ಯಾಚರಣೆಗೆ ತಹಶೀಲ್ದಾರ್ ನೇತೃತ್ವಲ್ಲಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ರಚನೆ ಮತ್ತು ಗ್ರಾಮ ಮಟ್ಟದಲ್ಲಿ ಪಂಚಾಯತ್ ಅಧಿಕಾರಿ ಮತ್ತು ಜನಪ್ರತಿನಿಧಿಗಳ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿ’ ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದರು.</p>.<p>ದೇರಳಕಟ್ಟೆಯಲ್ಲಿ ಉಳ್ಳಾಲ ತಾಲ್ಲೂಕು ಮಟ್ಟದ ಪ್ರಾಕೃತಿಕ ವಿಕೋಪಕ್ಕೆ ವಿವಿಧ ಇಲಾಖೆಗಳು ಹಾಗೂ ಸ್ಥಳೀಯಾಡಳಿತಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸೂಚನೆ ನೀಡಿದರು.</p>.<p>ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ನೀಡಿದ ಸಲಹೆಗಳನ್ನು ಶಾಸಕರು ಆಲಿಸಿದರು.</p>.<p>ತಾಲ್ಲೂಕಿನಾದ್ಯಂತ ರಸ್ತೆ ನಿರ್ಮಾಣ ಮಾಡಿದ್ದರೂ, ಸ್ಥಳೀಯಾಡಳಿತಗಳು ಚರಂಡಿಯ ನಿರ್ವಹಣೆ ನಡೆಸದ ಕಾರಣ ರಸ್ತೆಯಲ್ಲೇ ನೀರು ಹರಿದಿದೆ. ಸಣ್ಣ ಕಾರ್ಯಕ್ಕೂ ಜೆಸಿಬಿಗೆ ಕಾಯದೆ, ಸ್ಥಳೀಯರ ಸಹಕಾರ ಪಡೆದು ಸಮಸ್ಯೆ ಬಗೆಹರಿಸಲು ಯತ್ನಿಸಬೇಕು ಎಂದರು.</p>.<p>ಕಳೆದ ಎರಡು ದಿನಗಳು ಮಳೆ ಸುರಿದಾಗ ಟಾಸ್ಕ್ಫೋರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಇದೇ ರೀತಿ ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಿ ಎಂದು ಶ್ಲಾಘಿಸಿದರು.</p>.<p>ಅಪಾಯದಲ್ಲಿರುವ ಮರ, ವಿದ್ಯುತ್ ಕಂಬ ತೆರವಿಗೆ ಕ್ರಮ ಕೈಗೊಳ್ಳಬೇಕು. ಗುಡ್ಡ ಕುಸಿತದಿಂದ ಅಪಾಯದಲ್ಲಿರುವ ಮನೆಗಳ ಬಗ್ಗೆ ಸರ್ವೆ ನಡೆಸಿ ಎಂದರು.</p>.<p>ಪ್ರಾಕೃತಿಕ ವಿಕೋಪದಿಂದ ಮನೆಗೆ ಹಾನಿಯಾದರೆ ಪರಿಹಾರ ನೀಡಲಾಗುವುದು. ಕಂಪೌಂಡ್ ಹಾನಿಯಾದರೆ, ಗುಡ್ಡ ಕುಸಿದು ಮನೆ ಅಪಾಯದಲ್ಲಿದ್ದರೆ ಪರಿಹಾರ ಇಲ್ಲ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.</p>.<p>ತಹಶೀಲ್ದಾರ್ ಟಿ.ಜಿ. ಗುರುಪ್ರಸಾದ್ , ಉಳ್ಳಾಲ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಸೋಮೇಶ್ವರ ಪೌರಾಯುಕ್ತ ಮತ್ತಾಡಿ, ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಮಂಜುನಾಥ್ ಕೆ.ಎಚ್. ಮುಖಂಡ ಮಹಮ್ಮದ್ ಮೋನು, ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ‘ತುರ್ತು ಕಾರ್ಯಾಚರಣೆಗೆ ತಹಶೀಲ್ದಾರ್ ನೇತೃತ್ವಲ್ಲಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ರಚನೆ ಮತ್ತು ಗ್ರಾಮ ಮಟ್ಟದಲ್ಲಿ ಪಂಚಾಯತ್ ಅಧಿಕಾರಿ ಮತ್ತು ಜನಪ್ರತಿನಿಧಿಗಳ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿ’ ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದರು.</p>.<p>ದೇರಳಕಟ್ಟೆಯಲ್ಲಿ ಉಳ್ಳಾಲ ತಾಲ್ಲೂಕು ಮಟ್ಟದ ಪ್ರಾಕೃತಿಕ ವಿಕೋಪಕ್ಕೆ ವಿವಿಧ ಇಲಾಖೆಗಳು ಹಾಗೂ ಸ್ಥಳೀಯಾಡಳಿತಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸೂಚನೆ ನೀಡಿದರು.</p>.<p>ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ನೀಡಿದ ಸಲಹೆಗಳನ್ನು ಶಾಸಕರು ಆಲಿಸಿದರು.</p>.<p>ತಾಲ್ಲೂಕಿನಾದ್ಯಂತ ರಸ್ತೆ ನಿರ್ಮಾಣ ಮಾಡಿದ್ದರೂ, ಸ್ಥಳೀಯಾಡಳಿತಗಳು ಚರಂಡಿಯ ನಿರ್ವಹಣೆ ನಡೆಸದ ಕಾರಣ ರಸ್ತೆಯಲ್ಲೇ ನೀರು ಹರಿದಿದೆ. ಸಣ್ಣ ಕಾರ್ಯಕ್ಕೂ ಜೆಸಿಬಿಗೆ ಕಾಯದೆ, ಸ್ಥಳೀಯರ ಸಹಕಾರ ಪಡೆದು ಸಮಸ್ಯೆ ಬಗೆಹರಿಸಲು ಯತ್ನಿಸಬೇಕು ಎಂದರು.</p>.<p>ಕಳೆದ ಎರಡು ದಿನಗಳು ಮಳೆ ಸುರಿದಾಗ ಟಾಸ್ಕ್ಫೋರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಇದೇ ರೀತಿ ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಿ ಎಂದು ಶ್ಲಾಘಿಸಿದರು.</p>.<p>ಅಪಾಯದಲ್ಲಿರುವ ಮರ, ವಿದ್ಯುತ್ ಕಂಬ ತೆರವಿಗೆ ಕ್ರಮ ಕೈಗೊಳ್ಳಬೇಕು. ಗುಡ್ಡ ಕುಸಿತದಿಂದ ಅಪಾಯದಲ್ಲಿರುವ ಮನೆಗಳ ಬಗ್ಗೆ ಸರ್ವೆ ನಡೆಸಿ ಎಂದರು.</p>.<p>ಪ್ರಾಕೃತಿಕ ವಿಕೋಪದಿಂದ ಮನೆಗೆ ಹಾನಿಯಾದರೆ ಪರಿಹಾರ ನೀಡಲಾಗುವುದು. ಕಂಪೌಂಡ್ ಹಾನಿಯಾದರೆ, ಗುಡ್ಡ ಕುಸಿದು ಮನೆ ಅಪಾಯದಲ್ಲಿದ್ದರೆ ಪರಿಹಾರ ಇಲ್ಲ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.</p>.<p>ತಹಶೀಲ್ದಾರ್ ಟಿ.ಜಿ. ಗುರುಪ್ರಸಾದ್ , ಉಳ್ಳಾಲ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಸೋಮೇಶ್ವರ ಪೌರಾಯುಕ್ತ ಮತ್ತಾಡಿ, ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಮಂಜುನಾಥ್ ಕೆ.ಎಚ್. ಮುಖಂಡ ಮಹಮ್ಮದ್ ಮೋನು, ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>