‘ಮಹಾನಗರ ಪಾಲಿಕೆಯ ಅಧೀನದಲ್ಲಿನ ಕೇಂದ್ರ ಮಾರುಕಟ್ಟೆ ನಿರ್ಮಾಣಕ್ಕೆ ಅಧಿಕೃತ ಶಿಲಾನ್ಯಾಸ ಕೈಗೊಂಡಿಲ್ಲ. ನಿರ್ಮಾಣ ಕಾಮಗಾರಿ ಇನ್ನಷ್ಟೇ ಪ್ರಾರಂಭಿಸಬೇಕಿದೆ. ಹಳೇ ಮಾರುಕಟ್ಟೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಮಾಂಸದ ಮತ್ತು ಇನ್ನಿತರ ಅಂಗಡಿ ಮುಂಗಟ್ಟುಗಳ ಆಧಾರದಲ್ಲಿ ಸ್ಮಾರ್ಟ್ ಸಿಟಿ ಬಹಳ ಹಿಂದೆ ಇದರ ರೂಪರೇಷೆ, ನಕ್ಷೆಯನ್ನು ತಯಾರಿಸಿತ್ತೇ ವಿನಾ ಯಾವುದೇ ಮಾಂಸದ ಅಂಗಡಿಗಳಿಗೆ ಟೆಂಡರ್ ಪ್ರಕ್ರಿಯೆಯನ್ನು ನಡೆಸಿ ಅನುಮತಿ ನೀಡಿಲ್ಲ’ ಎಂದು ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.