2022ರ ಏ.4ರಂದು ಶಿವಗಿರಿ ಯಾತ್ರೆಯ 90ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ‘ಮನುಜಕುಲ ಒಂದೇ ಎನ್ನುವ ನಾರಾಯಣ ಗುರುಗಳ ಬೋಧನೆಯ ಸಂದೇಶಗಳನ್ನು ಜನರು ಅನುಸರಿಸಿದರೆ ಜಗತ್ತಿನ ಯಾವುದೇ ಶಕ್ತಿಯೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ’ ಎಂದು ಹೇಳಿದ್ದರು. ಅವರದೇ ಆಡಳಿತ ನಡೆಸುವ ರಾಜ್ಯ ಬಿಜೆಪಿ ಸರ್ಕಾರ ನಾರಾಯಣ ಗುರುಗಳ ಪಠ್ಯವನ್ನೇ ಕೈಬಿಟ್ಟಿದೆ. ಹಾಗಿರುವಾಗ ಮೋದಿ ಭಾಷಣದ ಹೇಳಿಕೆ ನಾಟಕೀಯವೇ ಎಂದು ಪ್ರಶ್ನಿಸಿದ್ದಾರೆ.