ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊದಲ ಬಾರಿಗೆ ವಿಧಾನ ಪರಿಷತ್ ಸ್ಥಾನ ಪಡೆದಿರುವ ನನಗೆ, ಅಧಿವೇಶನದಲ್ಲಿ ಕಾಂಗ್ರೆಸ್ಸಿಗರು ನಡೆದುಕೊಂಡ ರೀತಿ ನೋವು ತಂದಿದೆ. ಶತಮಾನದ ಇತಿಹಾಸ ಇರುವ ವಿಧಾನ ಪರಿಷತ್ಗೆ ಅಭಿಮಾನಪಡುವ ಪರಂಪರೆ ಇದೆ. ಪಕ್ಷ ರಾಜಕೀಯ ಹೊರತಾದ ವ್ಯಕ್ತಿಗಳು ಇರುವ ಇಲ್ಲಿ ಚಿಂತನ–ಮಂಥನ ನಡೆಯಬೇಕು. ಆದರೆ, ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ಸಿಗರು, ಜೆಡಿಎಸ್–ಕಾಂಗ್ರೆಸ್ ಪಕ್ಷಗಳ ನಾಯಕರ ನಡುವಿನ ಅಭಿಪ್ರಾಯ ಭೇದಗಳನ್ನು ವ್ಯಕ್ತಪಡಿಸಲು ಈ ವೇದಿಕೆಯನ್ನು ಉಪಯೋಗಿಸುತ್ತಿದ್ದಾರೆ’ ಎಂದು ಆರೋಪಿಸಿದರು.