<p><strong>ಮಂಗಳೂರು</strong>: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಎಂಎನ್ಆರ್ಇಜಿ) ಯೋಜನೆಯನ್ನು ಕೇಂದ್ರವು ರದ್ದುಪಡಿಸಿದ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದಲ್ಲಿ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಲಿದ್ದೇವೆ. ಇದೇ 26ರಿಂದ ಫೆ. 2ರವರೆಗೆ ಪ್ರತಿ ವಿಧಾನ ಕ್ಷೇತ್ರದಲ್ಲಿ 5 ಕಿ.ಮೀ.ಯಿಂದ 10 ಕೀ.ಮೀ ಪಾದಯಾತ್ರೆ ನಡೆಸಿ ಜನಜಾಗೃತಿ ಮೂಡಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p><p>ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಪಾದಯಾತ್ರೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಸದಸ್ಯರನ್ನು ಹಾಗೂ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಚೀಟಿ ಪಡೆದ ಕಾರ್ಮಿಕರನ್ನು ತೊಡಗಿಸಿಕೊಳ್ಳಲಿದ್ದೇವೆ’ ಎಂದರು. </p><p>‘ಈ ಯೋಜನೆಯಡಿ ರಾಜ್ಯಕ್ಕೆ ಪ್ರತಿ ವರ್ಷ ₹ 6ಸಾವಿರ ಕೋಟಿಗಳಷ್ಟು ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದವು. ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲಿ ತಲಾ ₹ 1 ಕೋಟಿಗಳನ್ನು ಮೊತ್ತದಷ್ಟು ಕೆಲಸಗಳಾಗುತ್ತಿದ್ದವು. ಇಡೀ ಯೋಜನೆಯನ್ನೇ ಮುಗಿಸಲು ಹೊರಟಿದ್ದಾರೆ. ಈ ಬಗ್ಗೆ ಇದರ ಫಲಾನುಭವಿಗಳನ್ನು ಜಾಗೃತಿ ಮೂಡಿಸಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಎಂಎನ್ಆರ್ಇಜಿ) ಯೋಜನೆಯನ್ನು ಕೇಂದ್ರವು ರದ್ದುಪಡಿಸಿದ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದಲ್ಲಿ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಲಿದ್ದೇವೆ. ಇದೇ 26ರಿಂದ ಫೆ. 2ರವರೆಗೆ ಪ್ರತಿ ವಿಧಾನ ಕ್ಷೇತ್ರದಲ್ಲಿ 5 ಕಿ.ಮೀ.ಯಿಂದ 10 ಕೀ.ಮೀ ಪಾದಯಾತ್ರೆ ನಡೆಸಿ ಜನಜಾಗೃತಿ ಮೂಡಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p><p>ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಪಾದಯಾತ್ರೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಸದಸ್ಯರನ್ನು ಹಾಗೂ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಚೀಟಿ ಪಡೆದ ಕಾರ್ಮಿಕರನ್ನು ತೊಡಗಿಸಿಕೊಳ್ಳಲಿದ್ದೇವೆ’ ಎಂದರು. </p><p>‘ಈ ಯೋಜನೆಯಡಿ ರಾಜ್ಯಕ್ಕೆ ಪ್ರತಿ ವರ್ಷ ₹ 6ಸಾವಿರ ಕೋಟಿಗಳಷ್ಟು ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದವು. ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲಿ ತಲಾ ₹ 1 ಕೋಟಿಗಳನ್ನು ಮೊತ್ತದಷ್ಟು ಕೆಲಸಗಳಾಗುತ್ತಿದ್ದವು. ಇಡೀ ಯೋಜನೆಯನ್ನೇ ಮುಗಿಸಲು ಹೊರಟಿದ್ದಾರೆ. ಈ ಬಗ್ಗೆ ಇದರ ಫಲಾನುಭವಿಗಳನ್ನು ಜಾಗೃತಿ ಮೂಡಿಸಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>