<p><strong>ಮೂಡುಬಿದಿರೆ:</strong> ಕಣ್ಣಿನ ಬಗ್ಗೆ ಇನ್ನೂ ಜನರಲ್ಲಿ ಜಾಗೃತಿ ಮೂಡಿಲ್ಲ. ಜಗತ್ತನ್ನು ಕಾಣಲು ಕಣ್ಣು ಬಹುಮುಖ್ಯ. ಆರೋಗ್ಯದ ಸಮಸ್ಯೆ ಬಂದಾಗ ಅಂಜಿಕೆ, ಭಯ ಪಡದೆ ವೈದ್ಯರ ಸೇವೆ ಪಡೆಯುವುದ ಅಗತ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.</p>.<p>ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್, ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು, ಗಾಣಿಗ ಯಾನೆ ಸಪಳಿಗ ಸೇವಾ ಸಂಘ ಮೂಡುಬಿದಿರೆ, ಮಿಜಾರು-ಎಡಪದವು, ಭಂಡಾರಿ ಸಮಾಜ ಸೇವಾ ಸಂಘ ಹಾಗೂ ಮಡಿವಾಳ ಸಮಾಜ ಸೇವಾ ಸಂಘ ಮೂಡುಬಿದಿರೆಯ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಮಂಗಳವಾರ ನಡೆದ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಉಚಿತ ನೇತ್ರ ಶಿಬಿರ ಒಂದು ವರ್ಷದವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಸುಮಾರು 5 ಸಾವಿರ ಜನರ ತಪಾಸಣೆ ನಡೆಸಿ, 2500 ಜನರಿಗೆ ಕನ್ನಡಕ ವಿತರಿಸಿ, ಸುಮಾರು 500 ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಮಾಡುವ ಗುರಿ ಇದೆ ಎಂದರು.</p>.<p>ಈ ಹಿಂದೆ ನಡೆದಿದ್ದ ಶಿಬಿರದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. 178 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.</p>.<p>ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ, ಮೂಡುಬಿದಿರೆ ಸಪಳಿಗೆ ಯಾನೆ ಗಾಣಿಗರ ಸೇವಾ ಸಂಘದ ಅಧ್ಯಕ್ಷ, ರಾಜೇಶ್ ಬಂಗೇರ, ಮಿಜಾರು-ಎಡಪದವು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಭಾಸ್ಕರ ಸಪಳಿಗ, ಮಡಿವಾಳ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಶ್ಯಾಮ ಎಂ., ಪ್ರಸಾದ್ ನೇತ್ರಾಲಯದ ಕಣ್ಣಿನ ತಜ್ಞ ಡಾ.ವಿಷ್ಣು, ಪ್ರಾಚಾರ್ಯ ಡಾ.ಸಜಿತ್ ಎಂ., ಪುರಸಭೆ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್ ಭಾಗವಹಿಸಿದ್ದರು.</p>.<p>ಡಾ.ಮಂಜುನಾಥ್ ಭಟ್ ಸ್ವಾಗತಿಸಿ, ಡಾ.ವಿಕ್ರಮ್ ಕುಮಾರ್ ವಂದಿಸಿದರು. ಡಾ.ಗೀತಾ ಬಿ.ಮಾರ್ಕಂಡೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಕಣ್ಣಿನ ಬಗ್ಗೆ ಇನ್ನೂ ಜನರಲ್ಲಿ ಜಾಗೃತಿ ಮೂಡಿಲ್ಲ. ಜಗತ್ತನ್ನು ಕಾಣಲು ಕಣ್ಣು ಬಹುಮುಖ್ಯ. ಆರೋಗ್ಯದ ಸಮಸ್ಯೆ ಬಂದಾಗ ಅಂಜಿಕೆ, ಭಯ ಪಡದೆ ವೈದ್ಯರ ಸೇವೆ ಪಡೆಯುವುದ ಅಗತ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.</p>.<p>ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್, ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು, ಗಾಣಿಗ ಯಾನೆ ಸಪಳಿಗ ಸೇವಾ ಸಂಘ ಮೂಡುಬಿದಿರೆ, ಮಿಜಾರು-ಎಡಪದವು, ಭಂಡಾರಿ ಸಮಾಜ ಸೇವಾ ಸಂಘ ಹಾಗೂ ಮಡಿವಾಳ ಸಮಾಜ ಸೇವಾ ಸಂಘ ಮೂಡುಬಿದಿರೆಯ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಮಂಗಳವಾರ ನಡೆದ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಉಚಿತ ನೇತ್ರ ಶಿಬಿರ ಒಂದು ವರ್ಷದವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಸುಮಾರು 5 ಸಾವಿರ ಜನರ ತಪಾಸಣೆ ನಡೆಸಿ, 2500 ಜನರಿಗೆ ಕನ್ನಡಕ ವಿತರಿಸಿ, ಸುಮಾರು 500 ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಮಾಡುವ ಗುರಿ ಇದೆ ಎಂದರು.</p>.<p>ಈ ಹಿಂದೆ ನಡೆದಿದ್ದ ಶಿಬಿರದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. 178 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.</p>.<p>ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ, ಮೂಡುಬಿದಿರೆ ಸಪಳಿಗೆ ಯಾನೆ ಗಾಣಿಗರ ಸೇವಾ ಸಂಘದ ಅಧ್ಯಕ್ಷ, ರಾಜೇಶ್ ಬಂಗೇರ, ಮಿಜಾರು-ಎಡಪದವು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಭಾಸ್ಕರ ಸಪಳಿಗ, ಮಡಿವಾಳ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಶ್ಯಾಮ ಎಂ., ಪ್ರಸಾದ್ ನೇತ್ರಾಲಯದ ಕಣ್ಣಿನ ತಜ್ಞ ಡಾ.ವಿಷ್ಣು, ಪ್ರಾಚಾರ್ಯ ಡಾ.ಸಜಿತ್ ಎಂ., ಪುರಸಭೆ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್ ಭಾಗವಹಿಸಿದ್ದರು.</p>.<p>ಡಾ.ಮಂಜುನಾಥ್ ಭಟ್ ಸ್ವಾಗತಿಸಿ, ಡಾ.ವಿಕ್ರಮ್ ಕುಮಾರ್ ವಂದಿಸಿದರು. ಡಾ.ಗೀತಾ ಬಿ.ಮಾರ್ಕಂಡೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>