<p><strong>ಮೂಡುಬಿದಿರೆ</strong>: ದೇಶದಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ದ್ರೋಹವಾಗಿದೆ ಎಂದು ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ನೀಟ್ ಪರೀಕ್ಷೆಗೆ ಶ್ರಮಪಟ್ಟ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ. ಕೇಂದ್ರ ಸರ್ಕಾರದ ನೀತಿಯು ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ದಾಖಲಾತಿ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ರಾಜ್ಯ ಸರ್ಕಾರ ಈ ಹಿಂದೆಯೆ ಆಕ್ಷೇಪ ವ್ಯಕ್ತಪಡಿಸಿ, ಸದನ ನಿರ್ಣಯ ಕೈಗೊಂಡಿತ್ತು. ಸಿಇಟಿ ಅತ್ಯುತ್ತಮವಾಗಿದ್ದು, ನೀಟ್ ಬೇಕಾಗಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು.</p>.<p>ಪ್ರಕರಣದ ಬಗ್ಗೆ ಕಾಲಮಿತಿಯ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಸಿಇಟಿ ಮಾದರಿಯಲ್ಲೇ ಪರೀಕ್ಷೆಗಳು ನಡೆಯಬೇಕು ಮತ್ತು ಅಂಥ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.</p>.<p>ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಮರ್ವಿನ್ ಲೋಬೊ, ಕೆಡಿಪಿ ಸದಸ್ಯ ತುಕ್ರಪ್ಪ ಕೆಂಬಾರೆ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ</strong>: ದೇಶದಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ದ್ರೋಹವಾಗಿದೆ ಎಂದು ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ನೀಟ್ ಪರೀಕ್ಷೆಗೆ ಶ್ರಮಪಟ್ಟ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ. ಕೇಂದ್ರ ಸರ್ಕಾರದ ನೀತಿಯು ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ದಾಖಲಾತಿ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ರಾಜ್ಯ ಸರ್ಕಾರ ಈ ಹಿಂದೆಯೆ ಆಕ್ಷೇಪ ವ್ಯಕ್ತಪಡಿಸಿ, ಸದನ ನಿರ್ಣಯ ಕೈಗೊಂಡಿತ್ತು. ಸಿಇಟಿ ಅತ್ಯುತ್ತಮವಾಗಿದ್ದು, ನೀಟ್ ಬೇಕಾಗಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು.</p>.<p>ಪ್ರಕರಣದ ಬಗ್ಗೆ ಕಾಲಮಿತಿಯ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಸಿಇಟಿ ಮಾದರಿಯಲ್ಲೇ ಪರೀಕ್ಷೆಗಳು ನಡೆಯಬೇಕು ಮತ್ತು ಅಂಥ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.</p>.<p>ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಮರ್ವಿನ್ ಲೋಬೊ, ಕೆಡಿಪಿ ಸದಸ್ಯ ತುಕ್ರಪ್ಪ ಕೆಂಬಾರೆ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>