<p><strong>ಮೂಡುಬಿದಿರೆ:</strong> ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಸ್ಕೂಟರ್ ಸಹಸವಾರೆ ಮೃತಪಟ್ಟಿದ್ದಾರೆ. ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಬಸ್ ಉರುಳಿದಾಗ ಸ್ಕೂಟರ್ಗೆ ಡಿಕ್ಕಿಯಾಗಿ ಮಹಿಳೆ ಗಾಯಗೊಂಡಿದ್ದರು.</p>.<p>ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಬನ್ನಡ್ಕದ ಸೋನ್ಸ್ ಫಾರ್ಮ್ಸ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿತ್ತು.</p>.<p>ಸಂಬಂಧಿಕರೊಂದಿಗೆ ಸಹಸವಾರೆಯಾಗಿದ್ದ ಪಡುಮಾರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೀತಾ (54) ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿತ್ತು. ಅವರನ್ನು ತಕ್ಷಣ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಗೀತಾ ಮುಂಬೈಯಲ್ಲಿ ನೆಲೆಸಿದ್ದು, ರಜೆಯಲ್ಲಿ ಊರಿಗೆ ಬಂದಿದ್ದರು ಎಂದು ತಿಳಿದುಬಂದಿದೆ.</p>.<p>ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದ ಹಲವು ಪ್ರಯಾಣಿಕರೂ ಗಾಯಗೊಂಡಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-28-323856240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಸ್ಕೂಟರ್ ಸಹಸವಾರೆ ಮೃತಪಟ್ಟಿದ್ದಾರೆ. ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಬಸ್ ಉರುಳಿದಾಗ ಸ್ಕೂಟರ್ಗೆ ಡಿಕ್ಕಿಯಾಗಿ ಮಹಿಳೆ ಗಾಯಗೊಂಡಿದ್ದರು.</p>.<p>ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಬನ್ನಡ್ಕದ ಸೋನ್ಸ್ ಫಾರ್ಮ್ಸ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿತ್ತು.</p>.<p>ಸಂಬಂಧಿಕರೊಂದಿಗೆ ಸಹಸವಾರೆಯಾಗಿದ್ದ ಪಡುಮಾರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೀತಾ (54) ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿತ್ತು. ಅವರನ್ನು ತಕ್ಷಣ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಗೀತಾ ಮುಂಬೈಯಲ್ಲಿ ನೆಲೆಸಿದ್ದು, ರಜೆಯಲ್ಲಿ ಊರಿಗೆ ಬಂದಿದ್ದರು ಎಂದು ತಿಳಿದುಬಂದಿದೆ.</p>.<p>ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದ ಹಲವು ಪ್ರಯಾಣಿಕರೂ ಗಾಯಗೊಂಡಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-28-323856240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>