<p>ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಪುಚ್ಚೆಮೊಗರು ಬಾವದಬೈಲು ಪ್ರದೇಶದಲ್ಲಿ ಬುಧವಾರ ದೈವ ಭಂಡಾರವನ್ನು ಮೆರವಣಿಗೆಯಲ್ಲಿ ಒಯ್ಯುತ್ತಿದ್ದಾಗ ಕಾಲುಸಂಕ ಮುರಿದು ಬಿದ್ದು ಪರಿಣಾಮ ದೈವದ ಮುಕ್ಕಾಲ್ದಿ ಸಹಿತ ಎಂಟು ಮಂದಿ ಗಾಯಗೊಂಡಿದ್ದಾರೆ.</p>.<p>ಬಾವದಗುತ್ತಿನಲ್ಲಿ ಧರ್ಮ ನೇಮಕ್ಕೆ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗುತ್ತಿದ್ದಾಗ ಕಾಲು ಸಂಕ ಮುರಿದಿದೆ.</p>.<p>ಹರೀಶ್ ಎಂಬವರ ಎರಡು ಕಾಲು ಮುರಿದಿವೆ. ದೈವದ ಮುಕ್ಕಾಲ್ದಿ ಸುನಿಲ್ ಶೆಟ್ಟಿ ಅವರ ಸೊಂಟ ಮತ್ತು ಕಾಲಿಗೆ ಗಾಯವಾಗಿದೆ. ಉಳಿದಂತೆ ರಾಜೇಶ್, ಯಶೋಧರ್, ಅಶೋಕ್, ದಿನೇಶ್, ಪ್ರವೀಣ್ ಶೆಟ್ಟಿ, ಲೋಕೆಶ್, ಉದಯ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.</p>.<p>ಸುನಿಲ್ ಶೆಟ್ಟಿ ಸಹಿತ ನಾಲ್ವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕೊಂಬು, ಬ್ಯಾಂಡ್ ವಾದ್ಯಗಳ ತಂಡ ಸಂಕ ದಾಟಿದ ನಂತರ ಅವರನ್ನು ಹಿಂಬಾಲಿಸಿ ಭಂಡಾರವಿದ್ದ ಪಲ್ಲಕ್ಕಿಯನ್ನು ಹಿಡಿದುಕೊಂಡವರು ಕಾಲು ಸಂಕ ದಾಟುತ್ತಿದ್ದಾಗ ಕಾಲು ಸಂಕ ಮುರಿದುಬಿದ್ದು ಸುಮಾರು 10 ಅಡಿ ಆಳದ ತೋಡಿಗೆ ಬಿದ್ದಾರೆನ್ನಲಾಗಿದೆ.</p>.<p>ಘಟನೆ ತಿಳಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಾರು 50 ವರ್ಷದ ಹಳೆಯ ಸೇತುವೆ ಇದಾಗಿದ್ದು ಶಿಥಿಲಾವಸ್ಥೆಯಲ್ಲಿತ್ತು ಎನ್ನಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-29-421217693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಪುಚ್ಚೆಮೊಗರು ಬಾವದಬೈಲು ಪ್ರದೇಶದಲ್ಲಿ ಬುಧವಾರ ದೈವ ಭಂಡಾರವನ್ನು ಮೆರವಣಿಗೆಯಲ್ಲಿ ಒಯ್ಯುತ್ತಿದ್ದಾಗ ಕಾಲುಸಂಕ ಮುರಿದು ಬಿದ್ದು ಪರಿಣಾಮ ದೈವದ ಮುಕ್ಕಾಲ್ದಿ ಸಹಿತ ಎಂಟು ಮಂದಿ ಗಾಯಗೊಂಡಿದ್ದಾರೆ.</p>.<p>ಬಾವದಗುತ್ತಿನಲ್ಲಿ ಧರ್ಮ ನೇಮಕ್ಕೆ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗುತ್ತಿದ್ದಾಗ ಕಾಲು ಸಂಕ ಮುರಿದಿದೆ.</p>.<p>ಹರೀಶ್ ಎಂಬವರ ಎರಡು ಕಾಲು ಮುರಿದಿವೆ. ದೈವದ ಮುಕ್ಕಾಲ್ದಿ ಸುನಿಲ್ ಶೆಟ್ಟಿ ಅವರ ಸೊಂಟ ಮತ್ತು ಕಾಲಿಗೆ ಗಾಯವಾಗಿದೆ. ಉಳಿದಂತೆ ರಾಜೇಶ್, ಯಶೋಧರ್, ಅಶೋಕ್, ದಿನೇಶ್, ಪ್ರವೀಣ್ ಶೆಟ್ಟಿ, ಲೋಕೆಶ್, ಉದಯ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.</p>.<p>ಸುನಿಲ್ ಶೆಟ್ಟಿ ಸಹಿತ ನಾಲ್ವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕೊಂಬು, ಬ್ಯಾಂಡ್ ವಾದ್ಯಗಳ ತಂಡ ಸಂಕ ದಾಟಿದ ನಂತರ ಅವರನ್ನು ಹಿಂಬಾಲಿಸಿ ಭಂಡಾರವಿದ್ದ ಪಲ್ಲಕ್ಕಿಯನ್ನು ಹಿಡಿದುಕೊಂಡವರು ಕಾಲು ಸಂಕ ದಾಟುತ್ತಿದ್ದಾಗ ಕಾಲು ಸಂಕ ಮುರಿದುಬಿದ್ದು ಸುಮಾರು 10 ಅಡಿ ಆಳದ ತೋಡಿಗೆ ಬಿದ್ದಾರೆನ್ನಲಾಗಿದೆ.</p>.<p>ಘಟನೆ ತಿಳಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಾರು 50 ವರ್ಷದ ಹಳೆಯ ಸೇತುವೆ ಇದಾಗಿದ್ದು ಶಿಥಿಲಾವಸ್ಥೆಯಲ್ಲಿತ್ತು ಎನ್ನಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-29-421217693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>