<p><strong>ಮೂಡುಬಿದಿರೆ:</strong> ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನ ಮನೆಯೊಂದಕ್ಕೆ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಸೋಮವಾರ ರಾತ್ರಿ ದಾಳಿ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ.</p>.<p>ನಿಡ್ಡೋಡಿ ಕಲ್ಲಕುಮೇರಿನ ಮಹೇಶ, ಕಟೀಲಿನ ಯಜ್ಞೇಶ್, ಮೂಲ್ಕಿ ನಡುಗೊಡೆಯ ದಿಲೀಪ್, ಬಜಪೆ ಕೊಂಡೆಮೂಲೆಯ ಶ್ರೀಕಾಂತ್ ಬಂಧಿತರು.</p>.<p>ಅವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎಂಬುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ.</p>.<p>ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ಘಟನೆಯ ವಿವರಗಳನ್ನು ಬಾಯಿಬಿಟ್ಟಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಕಲ್ಲಕುಮೇರಿನ ಮಹೇಶ್ ಎಂದು ಗುರುತಿಸಲಾಗಿದ್ದು, ತನ್ನ ಮನೆಯನ್ನೇ ಈ ಕೃತ್ಯಕ್ಕೆ ಬಳಸಿಕೊಂಡಿದ್ದ ಎನ್ನಲಾಗಿದೆ. ಈ ಆರೋಪಿಗಳು ಗಾಂಜಾ ವ್ಯವಹಾರದಲ್ಲೂ ತೊಡಗಿಸಿದ್ದ ಆರೋಪ ಇದ್ದು, ಪೊಲೀಸ್ ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನ ಮನೆಯೊಂದಕ್ಕೆ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಸೋಮವಾರ ರಾತ್ರಿ ದಾಳಿ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ.</p>.<p>ನಿಡ್ಡೋಡಿ ಕಲ್ಲಕುಮೇರಿನ ಮಹೇಶ, ಕಟೀಲಿನ ಯಜ್ಞೇಶ್, ಮೂಲ್ಕಿ ನಡುಗೊಡೆಯ ದಿಲೀಪ್, ಬಜಪೆ ಕೊಂಡೆಮೂಲೆಯ ಶ್ರೀಕಾಂತ್ ಬಂಧಿತರು.</p>.<p>ಅವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎಂಬುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ.</p>.<p>ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ಘಟನೆಯ ವಿವರಗಳನ್ನು ಬಾಯಿಬಿಟ್ಟಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಕಲ್ಲಕುಮೇರಿನ ಮಹೇಶ್ ಎಂದು ಗುರುತಿಸಲಾಗಿದ್ದು, ತನ್ನ ಮನೆಯನ್ನೇ ಈ ಕೃತ್ಯಕ್ಕೆ ಬಳಸಿಕೊಂಡಿದ್ದ ಎನ್ನಲಾಗಿದೆ. ಈ ಆರೋಪಿಗಳು ಗಾಂಜಾ ವ್ಯವಹಾರದಲ್ಲೂ ತೊಡಗಿಸಿದ್ದ ಆರೋಪ ಇದ್ದು, ಪೊಲೀಸ್ ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>