<p><strong>ಮೂಡುಬಿದಿರೆ:</strong> ಮೂಡುಮಾರ್ನಾಡು ಗ್ರಾಮದ ತಂಡ್ರಕೆರೆ ನಿವಾಸಿಗಳಾದ ಸುಮಿತ್ರಾ-ವಿಶ್ವನಾಥ್ ದಂಪತಿಯ ಶಿಥಿಲಗೊಂಡಿದ್ದ ಮನೆಯನ್ನು ಮರು ನಿರ್ಮಾಣ ಮಾಡಿಕೊಡುವ ಉದ್ದೇಶದಿಂದ ಯುವವಾಹಿನಿ ಮೂಡುಬಿದಿರೆ ಘಟಕದಿಂದ ಸುಮಾರು ₹6 ಲಕ್ಷ ವೆಚ್ಚದ ಯೋಜನೆ ರೂಪಿಸಿದ್ದು, ಗುರುವಾರ ಪಡುಮಾರ್ನಾಡು ಪಂಚಾಯಿತಿ ಅಧ್ಯಕ್ಷ ವಾಸುದೇವ ಭಟ್ ಶಿಲಾನ್ಯಾಸ ನೆರವೇರಿಸಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಮುರಳೀಧರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.</p>.<p>ಯೋಜನೆಯ ರೂವಾರಿಯಾದ ಯುವವಾಹಿನಿ ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕ ಶಂಕರ್ ಕೋಟ್ಯಾನ್ ಮಾತನಾಡಿ, ಸುಮಿತ್ರಾ ಅವರು ಯುವವಾಹಿನಿಯ ಸಕ್ರಿಯ ಸದಸ್ಯೆಯಾಗಿದ್ದು, ಸಂಘದ ಪ್ರತಿಯೊಂದು ಕಾರ್ಯಕ್ರಮದಲ್ಲೂ ತೊಡಗಿಸಿಕೊಂಡಿದ್ದಾರೆ. ಅವರ ಕಷ್ಟವನ್ನು ಅರಿತು ಸುಮಾರು 600 ಚದರ ಅಡಿ ವಿಸ್ತೀರ್ಣದ ಸುಮಾರು 6 ಲಕ್ಷ ವೆಚ್ಚದ ಮನೆಯನ್ನು ಮರುನಿರ್ಮಾಣ ಮಾಡಿಕೊಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಗ್ರಾ.ಪಂ ಸದಸ್ಯ ರಮೇಶ್ ಶೆಟ್ಟಿ , ಹಿರಿಯರಾದ ಮೋಹನ್ ಕೋಟ್ಯಾನ್, ವಾಸುದೇವ ಭಟ್ ದೇಣಿಗೆಯನ್ನು ಘೋಷಿಸಿದರು. ಘಟಕದ ಗೌರವ ಸಲಹೆಗಾರ ಸುರೇಶ್ ಕೋಟ್ಯಾನ್ ಒಂದು ಲೋಡ್ ಜಲ್ಲಿ ನೀಡುವುದಾಗಿ ತಿಳಿಸಿದರು. ಸುಶಾಂತ್ ಕರ್ಕೇರ ಅವರು ಮನೆಗೆ ಸಂಪೂರ್ಣ ಟೈಲ್ಸ್ ಒದಗಿಸುವ ಭರವಸೆ ನೀಡಿದರು.</p>.<p>ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರ, ಮೂಡುಬಿದಿರೆ ಘಟಕದ ಪ್ರಥಮ ಉಪಾಧ್ಯಕ್ಷ ವಿಧೇಶ್ ಎಂ., ಉಪಾಧ್ಯಕ್ಷ ಗಿರೀಶ್ ಕೋಟ್ಯಾನ್, ಸದಸ್ಯೆಯರಾದ ಜಯಶೀಲಾ ಪೂಜಾರಿ, ಶೋಭಾ ದಿನೇಶ್, ಮನೆಯ ಗುತ್ತಿಗೆದಾರ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.</p>.<p>ಮೂಡುಬಿದಿರೆಯ ಡ್ರಾಮಾ ಜೂನಿಯರ್ಸ್ ಖ್ಯಾತಿಯ ಪುಟ್ಟ ಪ್ರತಿಭೆಯ ಕುಟುಂಬದ ಸಂಕಷ್ಟವನ್ನು ಮನಗಂಡ ಯುವವಾಹಿನಿ, ಅವರ ಕುಟುಂಬಕ್ಕೆ ಹೊಸ ಮನೆ ನಿರ್ಮಿಸಿಕೊಡುವ ಸಂಕಲ್ಪ ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಮೂಡುಮಾರ್ನಾಡು ಗ್ರಾಮದ ತಂಡ್ರಕೆರೆ ನಿವಾಸಿಗಳಾದ ಸುಮಿತ್ರಾ-ವಿಶ್ವನಾಥ್ ದಂಪತಿಯ ಶಿಥಿಲಗೊಂಡಿದ್ದ ಮನೆಯನ್ನು ಮರು ನಿರ್ಮಾಣ ಮಾಡಿಕೊಡುವ ಉದ್ದೇಶದಿಂದ ಯುವವಾಹಿನಿ ಮೂಡುಬಿದಿರೆ ಘಟಕದಿಂದ ಸುಮಾರು ₹6 ಲಕ್ಷ ವೆಚ್ಚದ ಯೋಜನೆ ರೂಪಿಸಿದ್ದು, ಗುರುವಾರ ಪಡುಮಾರ್ನಾಡು ಪಂಚಾಯಿತಿ ಅಧ್ಯಕ್ಷ ವಾಸುದೇವ ಭಟ್ ಶಿಲಾನ್ಯಾಸ ನೆರವೇರಿಸಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಮುರಳೀಧರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.</p>.<p>ಯೋಜನೆಯ ರೂವಾರಿಯಾದ ಯುವವಾಹಿನಿ ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕ ಶಂಕರ್ ಕೋಟ್ಯಾನ್ ಮಾತನಾಡಿ, ಸುಮಿತ್ರಾ ಅವರು ಯುವವಾಹಿನಿಯ ಸಕ್ರಿಯ ಸದಸ್ಯೆಯಾಗಿದ್ದು, ಸಂಘದ ಪ್ರತಿಯೊಂದು ಕಾರ್ಯಕ್ರಮದಲ್ಲೂ ತೊಡಗಿಸಿಕೊಂಡಿದ್ದಾರೆ. ಅವರ ಕಷ್ಟವನ್ನು ಅರಿತು ಸುಮಾರು 600 ಚದರ ಅಡಿ ವಿಸ್ತೀರ್ಣದ ಸುಮಾರು 6 ಲಕ್ಷ ವೆಚ್ಚದ ಮನೆಯನ್ನು ಮರುನಿರ್ಮಾಣ ಮಾಡಿಕೊಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಗ್ರಾ.ಪಂ ಸದಸ್ಯ ರಮೇಶ್ ಶೆಟ್ಟಿ , ಹಿರಿಯರಾದ ಮೋಹನ್ ಕೋಟ್ಯಾನ್, ವಾಸುದೇವ ಭಟ್ ದೇಣಿಗೆಯನ್ನು ಘೋಷಿಸಿದರು. ಘಟಕದ ಗೌರವ ಸಲಹೆಗಾರ ಸುರೇಶ್ ಕೋಟ್ಯಾನ್ ಒಂದು ಲೋಡ್ ಜಲ್ಲಿ ನೀಡುವುದಾಗಿ ತಿಳಿಸಿದರು. ಸುಶಾಂತ್ ಕರ್ಕೇರ ಅವರು ಮನೆಗೆ ಸಂಪೂರ್ಣ ಟೈಲ್ಸ್ ಒದಗಿಸುವ ಭರವಸೆ ನೀಡಿದರು.</p>.<p>ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರ, ಮೂಡುಬಿದಿರೆ ಘಟಕದ ಪ್ರಥಮ ಉಪಾಧ್ಯಕ್ಷ ವಿಧೇಶ್ ಎಂ., ಉಪಾಧ್ಯಕ್ಷ ಗಿರೀಶ್ ಕೋಟ್ಯಾನ್, ಸದಸ್ಯೆಯರಾದ ಜಯಶೀಲಾ ಪೂಜಾರಿ, ಶೋಭಾ ದಿನೇಶ್, ಮನೆಯ ಗುತ್ತಿಗೆದಾರ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.</p>.<p>ಮೂಡುಬಿದಿರೆಯ ಡ್ರಾಮಾ ಜೂನಿಯರ್ಸ್ ಖ್ಯಾತಿಯ ಪುಟ್ಟ ಪ್ರತಿಭೆಯ ಕುಟುಂಬದ ಸಂಕಷ್ಟವನ್ನು ಮನಗಂಡ ಯುವವಾಹಿನಿ, ಅವರ ಕುಟುಂಬಕ್ಕೆ ಹೊಸ ಮನೆ ನಿರ್ಮಿಸಿಕೊಡುವ ಸಂಕಲ್ಪ ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>