<p><strong>ಮೂಡುಬಿದಿ</strong>ರೆ: ರೈತರಿಗೆ ಸಂಪೂರ್ಣ ಪರಿಹಾರ ಮೊತ್ತ ಪಾವತಿಸದೆ ಮೊಬೈಲ್ ಟವರ್ ನಿರ್ಮಾಣ ಮಾಡಲು ಮುಂದಾದ ಯುಕೆಟಿಎಲ್ ಕಂಪನಿ ಕ್ರಮವನ್ನು ವಿರೋಧಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ತೆಂಕಮಿಜಾರು ಗ್ರಾಮದ ಪಡೀಲು ಎಂಬಲ್ಲಿ ಪ್ರತಿಭಟನೆ ನಡೆಯಿತು.</p>.<p>ರೈತರ ಆಕ್ರೋಶಕ್ಕೆ ಮಣಿದ ಕಂಪನಿಯು ಕಾಮಗಾರಿ ನಿಲ್ಲಿಸಿ ವಾಪಸ್ ತೆರಳಿದೆ.</p>.<p>ಕಂಪನಿಯು ಬಾಧಿತ ರೈತರಿಗೆ ನ್ಯಾಯಯುತವಾಗಿ ನೀಡಬೇಕಾದ ಪರಿಹಾರ ಹಣವನ್ನು ನೀಡದೆ ಕಾಮಗಾರಿ ಆರಂಭಿಸಲು ಮುಂದಾಗಿತ್ತು. ಈ ವಿಷಯ ತಿಳಿದ ಸ್ಥಳೀಯ ಕಿಸಾನ್ ಸಮಿತಿಯ ಅಧ್ಯಕ್ಷ ಪ್ರವೀಣ್ ರೈ, ಪಂಚಾಯಿತಿ ಸದಸ್ಯರಾದ ಹರಿಪ್ರಸಾದ್ ರೈ, ನೇಮಿರಾಜ ಹಾಗೂ ಇತರ ಪ್ರಮುಖರು ಸ್ಥಳಕ್ಕೆ ಧಾವಿಸಿ ಕಾಮಗಾರಿಯನ್ನು ತಡೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಶಾಂತಿ ಪ್ರಸಾದ್ ಹೆಗ್ಡೆ, ರೈತರಿಗೆ ಪೂರ್ಣ ಪರಿಹಾರ ಸಿಗುವವರೆಗೂ ಯಾವುದೇ ಕಾರಣಕ್ಕೂ ಕೆಲಸ ಮಾಡಲು ಬಿಡುವುದಿಲ್ಲ. ಕಂಪನಿಯು ಕಾನೂನುಬಾಹಿರವಾಗಿ ಅಥವಾ ಬಲಾತ್ಕಾರದಿಂದ ರೈತರ ಜಾಗಕ್ಕೆ ಪ್ರವೇಶಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಬಂದಿದ್ದು, ಈ ವೇಳೆ ರೈತರು, ಕಂಪನಿ ಅಧಿಕಾರಿಗಳು ಮತ್ತು ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ರೈತರ ಪಟ್ಟು ಸಡಿಲಿಸದ ಕಾರಣ ಕಂಪನಿಯ ಕೆಲಸಗಾರರು ತಮ್ಮ ಸರಕು-ಸಾಮಗ್ರಿಗಳೊಂದಿಗೆ ಸ್ಥಳದಿಂದ ನಿರ್ಗಮಿಸಿದರು.</p>.<p>ನೇಮಿರಾಜ, ಪ್ರವೀಣ್ ಭಂಡಾರಿ, ಶಿವಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿ</strong>ರೆ: ರೈತರಿಗೆ ಸಂಪೂರ್ಣ ಪರಿಹಾರ ಮೊತ್ತ ಪಾವತಿಸದೆ ಮೊಬೈಲ್ ಟವರ್ ನಿರ್ಮಾಣ ಮಾಡಲು ಮುಂದಾದ ಯುಕೆಟಿಎಲ್ ಕಂಪನಿ ಕ್ರಮವನ್ನು ವಿರೋಧಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ತೆಂಕಮಿಜಾರು ಗ್ರಾಮದ ಪಡೀಲು ಎಂಬಲ್ಲಿ ಪ್ರತಿಭಟನೆ ನಡೆಯಿತು.</p>.<p>ರೈತರ ಆಕ್ರೋಶಕ್ಕೆ ಮಣಿದ ಕಂಪನಿಯು ಕಾಮಗಾರಿ ನಿಲ್ಲಿಸಿ ವಾಪಸ್ ತೆರಳಿದೆ.</p>.<p>ಕಂಪನಿಯು ಬಾಧಿತ ರೈತರಿಗೆ ನ್ಯಾಯಯುತವಾಗಿ ನೀಡಬೇಕಾದ ಪರಿಹಾರ ಹಣವನ್ನು ನೀಡದೆ ಕಾಮಗಾರಿ ಆರಂಭಿಸಲು ಮುಂದಾಗಿತ್ತು. ಈ ವಿಷಯ ತಿಳಿದ ಸ್ಥಳೀಯ ಕಿಸಾನ್ ಸಮಿತಿಯ ಅಧ್ಯಕ್ಷ ಪ್ರವೀಣ್ ರೈ, ಪಂಚಾಯಿತಿ ಸದಸ್ಯರಾದ ಹರಿಪ್ರಸಾದ್ ರೈ, ನೇಮಿರಾಜ ಹಾಗೂ ಇತರ ಪ್ರಮುಖರು ಸ್ಥಳಕ್ಕೆ ಧಾವಿಸಿ ಕಾಮಗಾರಿಯನ್ನು ತಡೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಶಾಂತಿ ಪ್ರಸಾದ್ ಹೆಗ್ಡೆ, ರೈತರಿಗೆ ಪೂರ್ಣ ಪರಿಹಾರ ಸಿಗುವವರೆಗೂ ಯಾವುದೇ ಕಾರಣಕ್ಕೂ ಕೆಲಸ ಮಾಡಲು ಬಿಡುವುದಿಲ್ಲ. ಕಂಪನಿಯು ಕಾನೂನುಬಾಹಿರವಾಗಿ ಅಥವಾ ಬಲಾತ್ಕಾರದಿಂದ ರೈತರ ಜಾಗಕ್ಕೆ ಪ್ರವೇಶಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಬಂದಿದ್ದು, ಈ ವೇಳೆ ರೈತರು, ಕಂಪನಿ ಅಧಿಕಾರಿಗಳು ಮತ್ತು ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ರೈತರ ಪಟ್ಟು ಸಡಿಲಿಸದ ಕಾರಣ ಕಂಪನಿಯ ಕೆಲಸಗಾರರು ತಮ್ಮ ಸರಕು-ಸಾಮಗ್ರಿಗಳೊಂದಿಗೆ ಸ್ಥಳದಿಂದ ನಿರ್ಗಮಿಸಿದರು.</p>.<p>ನೇಮಿರಾಜ, ಪ್ರವೀಣ್ ಭಂಡಾರಿ, ಶಿವಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>