ನಿರ್ಗಮಿತ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ, ಕಾರ್ಯದರ್ಶಿ ಪೂರ್ಣಚಂದ್ರ ಜೈನ್ ಅವರನ್ನು ಕ್ಲಬ್ ಪರವಾಗಿ ಸನ್ಮಾನಿಸಲಾಯಿತು. ಕೊರೊನಾ ಸೇನಾನಿಗಳಾದ ವೇಣೂರಿನ ಕುಸುಮಾವತಿ ಹಾಗೂ ಮೂಡುಬಿದಿರೆಯ ಸುಶೀಲಾ ಅವರನ್ನು ಗೌರವಿಸಲಾಯಿತು. ಸೇವಾ ಚಟುವಟಿಕೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಅಶಕ್ತರಿಗೆ ನೆರವು, ಶಾಲೆಗಳಿಗೆ ಪುಸ್ತಕ ವಿತರಿಸಲಾಯಿತು. ಡಾ.ಅಮರ್ದೀಪ್ ಮತ್ತು ಶಾಂತಲಾ ಸೀತಾರಾಮ ಆಚಾರ್ಯ ನಿರೂಪಿಸಿದರು. ಕಾರ್ಯದರ್ಶಿ ಮಂಜುನಾಥ ಪೂಜಾರಿ ವಂದಿಸಿದರು.