‘ಈ ಘಟನೆ ಕುರಿತು ಆಟೊ ಚಾಲಕ ದೂರು ನೀಡಿದ್ದು, ಇದರ ಆಧಾರದಲ್ಲಿ ಬಂಟ್ವಾಳ ನಿವಾಸಿ ಸಂದೇಶ (28), ಆತನ ಜೊತೆಗಿದ್ದ ಪ್ರಶಾಂತ್ (31) ಹಾಗೂ ರೋನಿತ್ (31) ಅವರನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಶಾಂತಿಭಂಗಕ್ಕೆ ಉದ್ದೇಶಪೂರ್ವಕ ಪ್ರಚೋದನೆ ಮತ್ತು ಅಕ್ರಮವಾಗಿ ನಿರ್ಬಂಧ ವಿಧಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.